ಜಾನಪದ ವಿಶ್ವವಿದ್ಯಾಲಯದಲ್ಲಿ ಸಚಿವ ಅನಂತಕುಮಾರಗೆ ಶ್ರದ್ಧಾಂಜಲಿ
ಲೋಕದರ್ಶನ ವರದಿ
ಶಿಗ್ಗಾವಿ13: ರಾಜಕೀಯ ಕ್ಷೇತ್ರದ ಮೂಲಕ ಸಾಮಾಜಿಕ ಪರಿವರ್ತನಾ ಕಾರ್ಯ ಮಾಡುವುದರೊಂದಿಗೆ ತಮ್ಮದೇ ಆದ ವ್ಯಕ್ತಿತ್ವ ರೂಪಿಸಿಕೊಂಡಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರ ಸಚಿವರಾದ ಅನಂತ ಕುಮಾರ ಅವರ ನಿಧನದಿಂದ ದೇಶಕ್ಕೂ ಕರುನಾಡಿಗೂ ತುಂಬಲಾರದ ನಷ್ಟವಾಗಿದೆ.
ಸತತ ಆರು ಬಾರಿ ಸಂಸದರಾಗಿ ಸಂಸತ್ತಿನಲ್ಲಿ ಕನರ್ಾಟಕದ ಪರ ಧ್ವನಿಯಾಗಿದ್ದ ಅವರು ಉತ್ತಮ ವಾಗ್ಮಿ ಮೇಲಾಗಿ ರಾಜಕೀಯ ಚಿಂತಕರಾಗಿದ್ದರು. ತಮ್ಮದೇಯಾದ ವಿಶಿಷ್ಟ ಚಿಂತನೆ, ವಿಚಾರಧಾರೆಗಳನ್ನು ಪ್ರತಿಪಾದಿಸುತ್ತಲೇ ಸಮಾಜೀಕ ಕಾರ್ಯಗಳಿಗೆ ಸಾಕ್ಷಿಯಾಗಿದ್ದರು. ಕನ್ನಡದ ಧೀಮಂತ ರಾಜಕೀಯ ಮುತ್ಸದ್ಧಿ ಅನಂತ ಕುಮಾರ ಅವರ ನಿಧನಕ್ಕೆ ಕನರ್ಾಟಕ ಜಾನಪದ ವಿಶ್ವವಿದ್ಯಾಲಯವು ಸಂತಾಪವನ್ನು ಸೂಚಿಸಿದೆ.
ಮೌಲ್ಯಮಾಪನ ಕುಲಸಚಿವ ಡಾ. ಎಂ.ಎನ್ ವೆಂಕಟೇಶ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂತಾಪ ಸೂಚಕ ಸಭೆಯಲ್ಲಿ ಮೌನಾಚರಣೆ ಮಾಡುವ ಮೂಲಕ ಕೇಂದ್ರ ಸಚಿವ ಅನಂತ ಕುಮಾರ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು. ಈ ಸಮಯದಲ್ಲಿ ಜಾನಪದ ವಿಶ್ವವಿದ್ಯಾಲಯದ ಸಮಸ್ತ ಪ್ರಾಧ್ಯಾಪಕ ವರ್ಗ ಹಾಗೂ ಭೋಧಕೇತರ ಸಿಬ್ಬಂದಿ ಸಂತಾಪ ಸೂಚಕ ಸಭೆಯಲ್ಲಿ ಹಾಜರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 