ಸುಗಮ ಎಸ್ಎಸ್ಎಲ್ಸಿ ಪರೀಕ್ಷೆಗೆ ಪೂರ್ವ ಸಿದ್ಧತೆ: ರಾಯಬಾಗ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಜಂತ್ರಿ
ರಾಯಬಾಗ: ಪಟ್ಟಣದ ಬಿಇಒ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಪ್ರಭಾರಿ ಬಿಇಒ ಎಚ್.ಎ.ಬಜಂತ್ರಿ.
ರಾಯಬಾಗ 19: ಮಾ.21ರಿಂದ ಎ.4ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಸುಗಮವಾಗಿ ಮತ್ತು ಯಾವುದೇ ಲೋಪದೋಷವಿಲ್ಲದೆ ನಡೆಸಲು ತಾಲೂಕಿನಲ್ಲಿ ಎಲ್ಲ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎ.ಬಜಂತ್ರಿ ತಿಳಿಸಿದರು.
ಮಂಗಳವಾರ ಪಟ್ಟಣ ಕ್ಷೇತ್ರ ಶಿಕ್ಷಣಾಧಿಕಾರಿ ಕಾಯರ್ಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 5982 ವಿದ್ಯಾಥರ್ಿಗಳು ಪರೀಕ್ಷೆ ಎದುರಿಸಲಿದ್ದಾರೆ. ತಾಲೂಕಿನಲ್ಲಿ ಒಟ್ಟು 18 ಕೇಂದ್ರಗಳಿದ್ದು, ರಾಯಬಾಗ, ಹಾರೂಗೇರಿ ಮತ್ತು ಕುಡಚಿ ಗಳಲ್ಲಿ ಕ್ಲಸ್ಟರ್ ಸಹಿತ 6, ಕ್ಲಸ್ಟರ್ ರಹಿತ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. 18 ಪರೀಕ್ಷಾ ಕೇಂದ್ರಗಳಲ್ಲಿ 400 ಜನ ಶಿಕ್ಷಕರು ಕೊಠಡಿ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. 18 ಸ್ಥಾನಿಕ ವಿಚಕ್ಷಕ ದಳಗಳು, 7 ಜನ ಮಾಗರ್ಾಧಿಕಾರಿ ಹಾಗೂ 2 ಸಂಚಾರಿ ವಿಚಕ್ಷಕ ದಳಗಳನ್ನು ರಚಿಸಲಾಗಿದೆ. ಎಲ್ಲ ಪರೀಕ್ಷೆ ಕೇಂದ್ರಗಳಲ್ಲಿ ಶಾಂತಿಯುತವಾಗಿ ಪರೀಕ್ಷೆಗಳು ನಡೆಸಲು ಸೂಕ್ತ ಬಂದೋಬಸ್ತ ಒದಗಿಸಲು ರಾಯಬಾಗ ಸಿಪಿಐ ಹಾಗೂ ರಾಯಬಾಗ, ಕುಡಚಿ, ಹಾರೂಗೇರಿ ಪಿಎಸ್ಐ ಅವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ನೋಡಲ ಅಧಿಕಾರಿ ಡಿ.ಎಸ್.ಡಿಗ್ರಜ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 