ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪಡೆದ ಪ್ರೇಮಾ ಈರ್ಪ ಕುಳೆಕುಮಟಗಿ
Prema Eerpa Kulekumatagi who won the best Anganwadi worker award
ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪಡೆದ ಪ್ರೇಮಾ ಈರ್ಪ ಕುಳೆಕುಮಟಗಿ
ವಿಜಯಪುರ, 08: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ “ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ” ಯನ್ನ ದೇವರಹಿಪ್ಪರಗಿ ತಾಲೂಕಿನ ಕೊರವಾರದ ಶಿಕ್ಷಕಿಯಾದ ಪ್ರೇಮಾ ಈರ್ಪ ಕುಳೆಕುಮಟಗಿ (ನಿಂಬೆವ್ವಾ ಈರ್ಪ ಬಿರಾದಾರ) ಅವರಿಗೆ ನೀಡಿ ಗೌರವಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಶಸ್ತಿ ನೀಡಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಕವಾಗಿ ಒದಗಿಸಲು ತೆಗೆದುಕೊಂಡಿರುವ ಕ್ರಮಗಳನ್ನು ಗುರುತಿಸಿ ಅಭಿನಂದಿಸುತ್ತಾ ಮುಂದೆಯೂ ಈ ಯೋಜನೆಯನ್ನ ಸಕಾರಾತ್ಮಕವಾಗಿ ಮುಂದುವರೆಸಿಕೊಂಡು ಹೋಗಬೇಕು ಎಂದು ಶುಭಹಾರೈಸಿದರು
ಪ್ರಶಸ್ತಿ ಸ್ವೀಕರಿಸಿ ಪತ್ರಿಕೆಯೊಂದಿಗೆ ಮಾತನಾಡಿದ ಪ್ರೇಮಾ ಈರ್ಪ ಕುಳೆಕುಮಟಗಿ ಈ ಪ್ರಶಸ್ತಿ ಬಂದಿರುವುದು ತುಂಬಾ ಕುಷಿಯನ್ನುಂಟು ಮಾಡಿದೆ, ಗ್ರಾಮೀಣ ಮಟ್ಟದಲ್ಲಿ ಕೆಲಸ ಮಾಡಲು ಸಾಕಷ್ಟು ಅನಾನೂಕೂಲಗಳ ಮಧ್ಯಯೂ ಮತ್ತೆ ಕೆಲಸ ಮಾಡಲು ಹೊಸ ಹುಮ್ಮಸ್ಸು ಬಂದಿದೆ, ಇದರಿಂದ ನಮ್ಮ ಕುಟುಂಬಸ್ಥರು, ಗ್ರಾಮಸ್ಥರು, ನಮ್ಮ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ, ಅವರೆಲ್ಲರಿಗೂ ಚಿರೃಣಿಯಾಗಿರುತ್ತೆನೆ, ಈ ಪ್ರಶಸ್ತಿಗೆ ನನ್ನ ಕೆಲಸವನ್ನು ಗುರುತಿಸಿ ಆಯ್ಕೆ ಮಾಡಿರುವ ಇಲಾಖೆಯ ಅಧಿಕಾರಿಗಳು ಧನ್ಯವಾದಗಳನ್ನು ತಿಳಿಸುತ್ತೆನೆ ಎಂದರು,
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 