ಶ್ರೀ ಸಂತಕವಿ ಸರ್ವಜ್ಞ ಜಯಂತಿ ನಿಮಿತ್ಯ ಪೂರ್ವಭಾವಿ ಸಭೆ

ಶ್ರೀ ಸಂತಕವಿ ಸರ್ವಜ್ಞ ಜಯಂತಿ  ನಿಮಿತ್ಯ ಪೂರ್ವಭಾವಿ ಸಭೆ Preparatory meeting on the occasion of Shri Santkavi Sarvajna Jayanti

ಗದಗ 07:  ಸಂತಕವಿ ಸರ್ವಜ್ಞ ಜಯಂತಿಯನ್ನು ಫೆಬ್ರುವರಿ 20 ರಂದು ನಗರದ  ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್‌. ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶನಿವಾರ  ಸಂತಕವಿ ಸರ್ವಜ್ಞ ಜಯಂತಿ ಕುರಿತು ಜರುಗಿದ  ಪೂರ್ವ ಸಿದ್ದಾತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ  ಹಾಸ್ಟೇಲ್, ಶಾಲಾ, ಕಾಲೇಜು, ಗ್ರಾಮ ಪಂಚಾಯಿತಿಯಲ್ಲಿ  ಸಂತಕವಿ ಸರ್ವಜ್ಞ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಸುವ ಕಾರ್ಯಕ್ರಮವಿದೆ.

ಸಾದನೆಗೈದ ಸಮಾಜದ ಹಿರಿಯರಿಗೆ ಸನ್ಮಾನ ಕಾರ್ಯಕ್ರನವಿದೆ. ಶಿಷ್ಠಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು.  ಸಂತಕವಿ ಸರ್ವಜ್ಞ ಅವರ ಕುರಿತು ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ಸಭೆಯಲ್ಲಿ ವೇದಿಕೆ ವ್ಯವಸ್ಥೆ ಅಲ್ಪೋಪಹಾರದ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.  ಸಂತಕವಿ ಸರ್ವಜ್ಞ  ಜಯಂತಿಯನ್ನು ಬಹಳ ಅಚ್ಚುಕಟ್ಟಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಶಿವಾನಂದ ಚಕ್ರಸಾಲಿ, ಮುರಿಯಪ್ಪ ಕೆರಿಯುರು,ಸುರೇಶ ಕುಂಬಾರ ಜಕ್ಕಪ್ಪ ಕುಂಬಾರ,ಈಶ್ವರ​‍್ಪ ಕುಂಬಾರ, ಯಲಪ್ಪ ಕುಂಬಾರ  ವಿ.ಆರ್‌.ಕುಂಬಾರ, ಎಚ್‌.ಕುಂಬಾರ, ಸಮಾಜದ ಹಿರಿಯರು ಗಣ್ಯರು ಪ್ರಮುಖರು ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.