ಇಂದು ಗಾಯನಾ ಹೊನಕಟ್ಟಿಗೆ ರಾಜ್ಯಪ್ರಶಸ್ತಿ ಪ್ರದಾನ
ಬೆಳಗಾವಿ13: ಸ್ಥಳೀಯ ಸೆಂಟ್ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ 2ನೇ ತರಗತಿ ಓದುತ್ತಿರುವ ಗಾಯನಾ ಜ್ಯೋತಿಲರ್ಿಂಗ ಹೊನಕಟ್ಟಿ ಇವಳಿಗೆ ರಾಜ್ಯ ಮಟ್ಟದ ಬಾಲ ಪ್ರತಿಭೆ ಪ್ರಶಸ್ತಿ ಲಭಿಸಿದೆ. ಸಂಗೀತ ವಿಭಾಗದಲ್ಲಿ ಸಾಧನೆ ಮಾಡಿದ್ದಕ್ಕೆ ಈ ಪ್ರಶಸ್ತಿ ಸಂದಿದೆ.
ವಿಜಯಪುರದ ಅಮ್ಮನ ಮಡಿಲು ಚಾರಿಟೆಬಲ್ ಟ್ರಸ್ಟ್ ಕೊಡಮಾಡುವ ಶಂ.ಗು.ಬಿರಾದಾರ ಹಾಗೂ ಭಾಸ್ಕರಾಚಾರ್ಯ ಬಾಲ ಪ್ರತಿಭೆ ಪ್ರಶಸ್ತಿ ಇದಾಗಿದೆ.
ದಿ.14 ರಂದು ಈ ನಿಮಿತ್ತ ವಿಜಯಪುರ ಇಕ್ಸಲಂಟ್ ಪ.ಪೂ.ವಿಜ್ಞಾನ ಕಾಲೇಜಿನಲ್ಲಿ ಏರ್ಪಡಿಸಿದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗುವುದು ಕಾತ್ರಾಳ ಗುರುದೇವ ಆಶ್ರಮದ ಶ್ರೀ ಅಮೃತಾನಂದ ಸ್ವಾಮೀಜಿ ಸಾನಿಧ್ಯ ವಹಿಸುವರು. ಪಾಲಿಕೆ ಆಯುಕ್ತ ಡಾ.ಜೀದ್ರಾಮ ಕಾರ್ಯಕ್ರಮ ಉದ್ಘಾಟಿಸುವರು. ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಟ್ರಸ್ಟ್ ಸಂಚಾಲಕ ಟಿ.ಎಲ್. ಅಂಬಿಗೇರ ತಿಳಿಸಿದ್ದಾರೆ. ಸಾಧಕ ವಿದ್ಯಾಥರ್ಿನಿ ಪೊಲೀಸ್ ಅಧಿಕಾರಿ ಹಾಗೂ ಜಾನಪದ ಕಲಾವಿದ ಜ್ಯೋತಿಲರ್ಿಂಗ ಹೊನಕಟ್ಟಿ ಇವರ ಸುಪುತ್ರಿಯಾಗಿದ್ದಾಳೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 