ಭಾಷೆ, ಸಾಹಿತ್ಯ ಮತ್ತು ಸಂಸ್ಕ್ರತಿ ಪರಂಪರೆ ಮುಂದಿನ ಪೀಳಿಗೆ ಉಳಿಸಿ
Preserve language, literature and cultural heritage for future generations
ಹೂವಿನ ಹಡಗಲಿ 27: ಪಟ್ಟಣದ ಎಸ್.ಆರ್.ಎಂ.ಪಿ.ಪಿ ಕಾಲೇಜಿನಲ್ಲಿ ಈಚೆಗೆ ನಡೆದ 2025-26 ನೇ ಸಾಲಿನ ’ಕನ್ನಡ ಸಿರಿ ಕನ್ನಡ ಪ್ರತಿಭಾ ಪರೀಕ್ಷೆ ಕಾರ್ಯಕ್ರಮ ಜರುಗಿತು. ಶಾಸಕ ಕೃಷ್ಣನಾಯಕ ಮಾತನಾಡಿನಮ್ಮ ನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಬೆಳೆಸುವಲ್ಲಿ ಇಂತಹ ಪ್ರತಿಭಾ ಪರೀಕ್ಷೆಗಳು ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳಲ್ಲಿ ಕನ್ನಡದ ಅರಿವು ಮತ್ತು ಆಸಕ್ತಿಯನ್ನು ಮೂಡಿಸುತ್ತಿರುವ ’ಕನ್ನಡಸಿರಿ’ ಟ್ರಸ್ಟ್ನ ಕಾರ್ಯ ಶ್ಲಾಘನೀಯ ಎಂದರು. ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ರಂಗಭಾರತಿ ಕಾರ್ಯಾಧ್ಯಕ್ಷ ಶ್ರೀಮತಿ ಎಂ.ಪಿ. ಸುಮಾ ವಿಜಯ್ , ಮಾಜಿ ಪುರಸಭಾ ಅಧ್ಯಕ್ಷ ವಾರದ ಗೌಸ್ ಮೊದ್ದಿನ್, ಕನ್ನಡಸಿರಿ ಟ್ರಸ್ಟ್ನ ಸಂಸ್ಥಾಪಕ ನಿರ್ದೇಶಕ ಎ.ಕೆ. ಆನಂದ ಹೊನ್ನೂರು, ಮುಖಂಡರಾದ ಬೀರಬ್ಬಿ ಮಂಜುನಾಥ್, ಪುನೀತ್ ದೊಡ್ಮಿನಿ, ಶಿವರಾಜ್. ಗುರುಪ.ಸಾದ್, ತಿರುಕಪ್ಪ ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 