ಹಿಡಕಲ್ನಲ್ಲಿ ಪತ್ರಿಕಾ ದಿನಾಚರಣೆ
Press Day Celebration at Hidkal
ರಾಯಬಾಗ 02: ಸಂವಿಧಾನದ ನಾಲ್ಕನೆಯ ಅಂಗವಾದ ಪತ್ರಿಕಾ ರಂಗ ಸಮಾಜವನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತದೆ ಎಂದು ಹಾರೂಗೇರಿ ಸಿದ್ದೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಟಿ ಎಸ್ ವಂಟಗೂಡಿ ಹೇಳಿದರು.ಬುಧವಾರ ತಾಲೂಕಿನ ಹಿಡಕಲ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜುಲೈ 1 ಕನ್ನಡ ಪತ್ರಿಕೋದ್ಯಮದ ಇತಿಹಾಸ ಪರಂಪರೆ ಮತ್ತು ಸೇವೆಯನ್ನು ಸ್ಮರಿಸುವ ದಿನವಾಗಿದೆ. ಪತ್ರಕರ್ತರು ಎಲ್ಲಿಯವರೆಗೆ ಎಚ್ಚರವಾಗಿರುತ್ತಾರೋ ಅಲ್ಲಿಯವರೆಗೆ ಪ್ರಜಾಪ್ರಭುತ್ವದ ವ್ಯವಸ್ಥೆ ಶುದ್ಧವಾಗಿರುತ್ತದೆ. ಅನ್ಯಾಯ ಆದವರಿಗೆ ನ್ಯಾಯ ದೊರಕಿಸುವ ಕಾರ್ಯವನ್ನು ಪತ್ರಕರ್ತರು ಮಾಡುತ್ತಾರೆ ಎಂದರು. ಶಾಲೆ ಪ್ರಧಾನ ಗುರು ಬಿ ಎಲ್ ಘಂಟಿ, ಟಿ ಆರ್ ಕೋಳಿ, ಮಾಲೂತಾಯಿ ಪಾರ್ಥನಹಳ್ಳಿ, ಭಾರತಿ ಹಳ್ಳೆಪ್ಪಗೋಳ, ಜಯಶ್ರೀ ಹಳ್ಳೂರ, ಪ್ರಭಾವತಿ ರಾಯಮಾನೆ, ಪದ್ಮಾವತಿ ನಾಯ್ಕ, ಲಕ್ಷ್ಮೀ ಬಡಿಗೇರ, ಗಾಯತ್ರಿ ಹೆಚ್ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 