ಲಸಿಕೆ ಹಾಕಿಸಿ ರೇಬಿಸ್ ತಡೆಗಟ್ಟಿಸಿ: ಡಾ.ಕೆ.ಶೋಭಾಸಲಹೆ
Prevent rabies by getting vaccinated: Dr. K. Shobha advises
ಲಸಿಕೆ ಹಾಕಿಸಿ ರೇಬಿಸ್ ತಡೆಗಟ್ಟಿಸಿ: ಡಾ.ಕೆ.ಶೋಭಾಸಲಹೆ
ಬಳ್ಳಾರಿ 24: ರೇಬಿಸ್ ಗಂಭೀರ ಮಾರಣಾಂತಿಕ ಕಾಯಿಲೆಯಾಗಿದ್ದು, ನಾಯಿ ಕಚ್ಚಿದ ತಕ್ಷಣ ನಿರ್ಲಕ್ಷ್ಯ ಮಾಡದೇ ಮತ್ತು ಗಿಡಮೂಲಿಕೆಗಳ ಓಷಧಿ ಕೊಡಿಸದೇ ಹತ್ತಿರದ ಆರೋಗ್ಯ ಕೇಂದ್ರದಲ್ಲಿ ರೇಬಿಸ್ ಇಮ್ಯೂನೊಗ್ಲೊಬಿಲಿನ್ ಲಸಿಕೆ ಹಾಕಿಸಬೇಕು ಎಂದು ಮಿಲ್ಲರ್ ಪೇಟೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದಾಧಿಕಾರಿ ಡಾ.ಶೋಭಾ ಅವರು ಹೇಳಿದರು.
ಮಿಲ್ಲರ್ ಪೇಟೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹನುಮಾನ್ ನಗರ ಬಡಾವಣೆಯಲ್ಲಿ ನಾಯಿ ಕಚ್ಚುವುದರಿಂದ ಬರುವ ರೇಬೀಸ್ ಕಾಯಿಲೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾಯಿ ಕಡಿತದ ಜಾಗದಲ್ಲಿ ಸ್ವಚ್ಛ ನೀರಿನಿಂದ 10 ರಿಂದ 15 ನಿಮಿಷಗಳ ಕಾಲ ಸೋಪಿನಿಂದ ಚೆನ್ನಾಗಿ ತೊಳೆಯಬೇಕು. ರಕ್ತ ಸ್ರಾವ ಆಗುತ್ತಿದ್ದಲ್ಲಿ ಆ ಭಾಗಕ್ಕೆ ಸ್ವಚ್ಛವಾದ ಬಟ್ಟೆಯಿಂದ ಅಥವಾ ಹತ್ತಿಯಿಂದ ನಿಧಾನವಾಗಿ ಒತ್ತಿ ಸಾಧ್ಯವಾದಷ್ಟು ಬೇಗ ರಕ್ತಸ್ರಾವ ನಿಲ್ಲಿಸಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು ಅಥವಾ ಆ ಬಡಾವಣೆಯ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ನೀರೀಕ್ಷಣಾಧಿಕಾರಿಗಳಾದ ಶರತ್ ಸಿ.ಆರ್., ಚೇತನ್ ಎಂ.ಕೆ., ಎಂ.ಎಲ್.ವಿ ಸೋಮಶೇಖರ್ ಸೇರಿದಂತೆ ಆಶಾ ಕಾರ್ಯಕರ್ತೆಯರಾದ ತಾಯಮ್ಮ, ನವೀನ, ಶ್ರುತಿ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 