ಭಯೋತ್ಪಾದಕರು ಎಲ್ಲೇ ಅಡಗಿದ್ದರೂ ಬಿಡದೆ ಹತ್ಯೆ: ಪ್ರಧಾನಿ ಮೋದಿ ಕಠಿಣ ಎಚ್ಚರಿಕೆ
ಮುಜಾಫರ್ ಪುರ್ ಏ 30 ಭಯೋತ್ಪಾದಕರು ಎಲ್ಲೇ ಅಡಗಿದ್ದರೂ ಭದ್ರತಾ ಪಡೆಗಳು ನುಗ್ಗಿ ಹತ್ಯೆ ಮಾಡಲಿವೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ. ಭಯೋತ್ಪಾದಕರು ತಮ್ಮ ಮನೆಗಳಲ್ಲಿ ಅಡಗಿದ್ದರೂ, ಭಾರತದಲ್ಲಲ್ಲದೇ ಗಡಿಯ ಹೊರಗೆ ಅಡಗಿದ್ದರೂ ಭದ್ರತಾಪಡೆಗಳು ಹತ್ಯೆ ಮಾಡದೆ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಮಂಗಳವಾರ ಇಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಿಂದ ಭಯೋತ್ಪಾದನೆಯನ್ನು ನಿಮರ್ೂಲನೆಗೊಳಿಸಲು ತಮ್ಮಸರ್ಕಾರ ಕ್ಕೆ ಮಾತ್ರ ಧೈರ್ಯ ಮತ್ತು ಇಚ್ಛಾಶಕ್ತಿ ಇದೆ. ಹಿಂದಿನ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಒಡೆದಾಳುವ ಮತ್ತು ಅಶಾಂತಿ ಉಂಟುಮಾಡುವ ಶಕ್ತಿಗಳನ್ನು ಎದುರಿಸುವ ಇಚ್ಛಾಶಕ್ತಿಯ ಕೊರತೆ ಇತ್ತು. ಪಾಕಿಸ್ತಾನದ ಪಾತ್ರ ಇದೆ ಎಂಬ ಸುಳಿವು ದೊರೆತರೆ ಇಂತಹ ಶಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಹೆದರುತ್ತಿತ್ತು ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ದೇಶದಲ್ಲಿ ಆಗಿಂದಾಗ್ಗೆ ಸರಣಿ ಬಾಂಬ್ ಸ್ಫೋಟಗಳು ನಡೆಯುತ್ತಿದ್ದವು. ಆದರೆ, ಕಳೆದ ಐದು ವರ್ಷಗಳಲ್ಲಿ ಇಂತಹ ಯಾವುದೇ ಘಟನೆ ನಡೆದಿಲ್ಲ. ಭಯೋತ್ಪಾದಕರ ಗಡಿಯಿಂದ ಹೊರಗೆ ಅಡಗಿದ್ದರೂ ನುಗ್ಗಿ ಹತ್ಯೆ ಮಾಡುವ ಗುಂಡಿಗೆ ಸಕರ್ಾರಕ್ಕಿದೆ ಎಂದು ಅವರು ಹೇಳಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 