ಕನ್ನಡಪರ ಹೋರಾಟಗಾರ ಶಂಕರ ಹೂಗಾರರಿಗೆ ಕನ್ನಡ ನುಡಿಶ್ರೀ ಪ್ರಶಸ್ತಿಗೆ ಆಯ್ಕೆ
Pro-Kannada activist Shankara Hoogara selected for Kannada Nudishri Award
ಯಲಬುರ್ಗಾ 28: ಕನ್ನಡಪರ ಹೋರಾಟಗಾರರು,ಕರ್ನಾಟಕ ಸ್ವಾಭಿಮಾನಿ ವೇದಿಕೆ ರಾಜ್ಯಧ್ಯಕ್ಷರು ಆಗಿರುವ ತಾಲೂಕಿನ ಕಲ್ಲೂರು ಗ್ರಾಮದ ಶಂಕರ ಹೂಗಾರ ಅವರಿಗೆ ಕನ್ನಡ ನುಡಿಶ್ರೀ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.ಅಖಂಡ ಕರ್ನಾಟಕ ಏಕೀರಣ ಮತ್ತು ಭಾರತ ಸ್ವಾತಂತ್ಯ ಸಂಗ್ರಾಮ ಮುಂಚೂಣಿಯಲ್ಲಿದ್ದು,ನಾಗನೂರು ಸ್ವಾಮೀಗಳು ಎಂದೇ ಗಡಿಭಾಗ ಬೆಳಗಾವಿಯಲ್ಲಿ ಹೆಸರು ಪಡೆದಿರುವ ರುದ್ರಾಕ್ಷಿಮಠವು ನಾಡಿನ ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ,ಸಾಹಿತ್ಯಿಕ,ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತ ಬಂದಿದೆ. ಈ ನಿಟ್ಟಿನಲ್ಲಿ ಇದೇ ಡಿಸೆಂಬರ 6 ರಂದು ಬೆಳಗಾವಿಯಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ನಾಡು ನುಡಿಗಾಗಿ ಹೋರಾಟಗಾರರನ್ನು ಗುರ್ತಿಸಿ ರುದ್ರಾಕ್ಷಿಮಠದಿಂದ ಕೊಡಮಾಡುವ ಕನ್ನಡ ನುಡಿಶ್ರೀ ಪ್ರಶಸ್ತಿಗೆ ತಾಲೂಕಿನ ಕಲ್ಲೂರು ಗ್ರಾಮದವರೇ ಆಗಿರುವ ಬೆಂಗಳೂರಿನಲ್ಲಿರುವ ಕನ್ನಡಪರ ಹೋರಾಟಗಾರರು,ಕರ್ನಾಟಕ ಸ್ವಾಭಿಮಾನಿ ವೇದಿಕೆ ರಾಜ್ಯಧ್ಯಕ್ಷ ಶಂಕರ ಹೂಗಾರ ಅವರಿಗೆ ಕನ್ನಡ ನುಡಿಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಬೆಳಗಾವಿಯ ನಾಗನುರು ರುದ್ರಾಕ್ಷಿಮಠದ ಪೀಠಾಧಿಪತಿ ಡಾ.ಅಲ್ಲಮಪ್ರಭು ಸ್ವಾಮಿಜಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 