ಜನಪರ ಯೋಜನೆಗಳೇ ಕಾಂಗ್ರೆಸ್ ಸರಕಾರದ ಮೂಲ ಮಂತ್ರವಾಗಿದೆ
Pro-people schemes are the basic mantra of the Congress government
ಜನಪರ ಯೋಜನೆಗಳೇ ಕಾಂಗ್ರೆಸ್ ಸರಕಾರದ ಮೂಲ ಮಂತ್ರವಾಗಿದೆ
ರಾಣಿಬೆನ್ನೂರ 13: ಜನಪರ ಯೋಜನೆಗಳೇ ಕಾಂಗ್ರೆಸ್ ಸರಕಾರದ ಮೂಲ ಮಂತ್ರವಾಗಿದೆ ಎಂದು ಶಾಸಕ ಪ್ರಕಾಶ್ ಕೋಳಿವಾಡ ಹೇಳಿದರು. ತಾಲೂಕಿನ ಖಂಡೇರಾಯನಹಳ್ಳಿ ಗ್ರಾಮದಲ್ಲಿ ಸಿ.ಸಿ ರಸ್ತೆ ಹಾಗೂ ಸಿ.ಸಿ ಗಟಾರ ಕಾಮಗಾರಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ನುಡಿದಂತೆ ನಡೆದಿದೆ. ಹಿಂದುಳಿದವರು. ದೀನದಲಿತರು. ಬಡವರ ಏಳಿಗೆ ಬಯಸಿ ತಾಂಡಾಗಳ ಅಭಿವೃದ್ಧಿಗೆ ಹೊತ್ತು ನೀಡಲಾಗಿದೆ. ಪ್ರತಿ ಗ್ರಾಮಕ್ಕೆ ಕುಡಿಯುವ ನೀರು. ಗಟಾರ. ರಸ್ತೆ, ವಿದ್ಯುತ್ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸಲಾಗಿದೆ ಎಂದರು. ಭೂ ಸೇನಾ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಸಿದ್ದೇಶ್ವರ ವಿ.ಎ, ಸಹಾಯಕ ಇಂಜಿನಿಯರ್ ವಿಕಾಸ್ ರೆಡ್ಡಿ. ಪುಟ್ಟಪ್ಪ ಮರಿಯಮ್ಮನವರ. ತಿರುಪತಿ ಅಜ್ಜನವರ. ಡಾಕೇಶ ಲಮಾಣಿ. ಓಬೇಶ್ ಲಮಾಣಿ. ಆನಂದಪ್ಪ ಲಮಾಣಿ. ಶಿವಪ್ಪ ಲಮಾಣಿ. ಮಲ್ಲೇಶಪ್ಪ ಲಮಾಣಿ. ಉಮಾ ಲಮಾಣಿ. ನೇತ್ರಾವತಿ ಲಮಾಣಿ. ಸುಭಾಷ್ ಕೊಡ್ಲೆರ್,ಗುಡ್ಡಪ್ಪ ಹೆಡಿಯಾಲ ಸೇರಿದಂತೆ ಮತ್ತಿತರರು ಇದ್ದರು. ಫೊಟೊ:13ಆರ್ಎನ್ಆರ್02ರಾಣಿಬೆನ್ನೂರ: ತಾಲೂಕಿನ ಖಂಡೇರಾಯನಹಳ್ಳಿ ಗ್ರಾಮದಲ್ಲಿ ಸಿ.ಸಿ ರಸ್ತೆ ಹಾಗೂ ಸಿ.ಸಿ ಗಟಾರ ಕಾಮಗಾರಿಗಳ ನಿರ್ಮಾಣಕ್ಕೆ ಶಾಸಕ ಪ್ರಕಾಶ್ ಕೋಳಿವಾಡ ಭೂಮಿ ಪೂಜೆ ನೆರವೇರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 