ಆರಾಧ್ಯ ದೈವ ಮುಂಜಿ ಬಸವೇಶ್ವರ ಗಂಗೆಸ್ಥಳ ಮೆರವಣಿಗೆ
Procession of the worshipped deity Munji Basaveshwara Gangesthala
ಆರಾಧ್ಯ ದೈವ ಮುಂಜಿ ಬಸವೇಶ್ವರ ಗಂಗೆಸ್ಥಳ ಮೆರವಣಿಗೆ
ಕಂಪ್ಲಿ11 ತಾಲೂಕಿನ ನಂ.10 ಮುದ್ದಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಬೆಳಗೋಡಹಾಳ್ ಗ್ರಾಮದಲ್ಲಿ ಆರಾಧ್ಯ ದೈವ ಮುಂಜಿ ಬಸವೇಶ್ವರ ಗಂಗೆಸ್ಥಳ ಮೆರವಣಿಗೆ ಅತ್ಯಂತ ಸಂಭ್ರಮ ಸಡಗರದಿಂದ ಸೋಮವಾರ ಜರುಗಿತು.ತುಂಗಭದ್ರ ನದಿ ತಟದಲ್ಲಿ ಗಂಗೆಪೂಜೆ ನೆರವೇರಿಸಿದ ನಂತರ ಗ್ರಾಮದಲ್ಲಿ ಮೆರವಣಿಗೆ ಪ್ರಾರಂಭಿಸಿ, ತದನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮುಂಜಿ ಬಸವೇಶ್ವರ ದೇವಸ್ಥಾನ ಬಳಿಯಲ್ಲಿ ಸಮಾವೇಶಗೊಂಡಿತು. ವೀರಗಾಸೆ, ಕುಂಭ, ಕಳಸ, ನಂದಿಕೋಲು, ತಾಷಾರಾಂಡೋಲ್ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ದೇವಸ್ಥಾನದಲ್ಲಿ ಅಭಿಷೇಕ, ಪುಷ್ಪಾಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಜನರು ಕಾಯಿ, ಕರ್ೂರ ನೀಡಿ ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಬೆಳಗೋಡು ಗ್ರಾಪಂ ಸದಸ್ಯ ಎಸ್.ಚಂದ್ರಶೇಖರಗೌಡ, ಮುಖಂಡರಾದ ಕೆ.ದೊಡ್ಡಪ್ಪ, ಎಸ್.ವಿರುಪಾಕ್ಷಿ, ಓಂಕಾರಿಗೌಡ, ಜೀರ್ ಅಯ್ಯಪ್ಪ, ಎಂ.ಮೂರ್ತಿಸ್ವಾಮಿ, ಕೆ.ರಾಜಶೇಖರ, ವೈ.ಮಲ್ಲಿಕಾರ್ಜುನಗೌಡ, ಜಿ.ರಾಜಶೇಖರ, ಕಲ್ಯಾಣಿ ಗಂಗಾಧರ, ಜಿ.ತಿಪ್ಪೇರುದ್ರ, ಮಡಿವಾಳ ಅಂಬರೇಶ, ಕಲ್ಯಾಣಿ ಚನ್ನಬಸುವ ಹಾಗೂ ಗ್ರಾಮದ ಸದ್ಭಕ್ತರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 