ವೃತ್ತಿಪರ ಸ್ವವಿವರ ಮಾಹಿತಿ ಬರವಣಿಗೆ ಅಭಿವೃದ್ಧಿ ಕಾರ್ಯಕ್ರಮ
Professional Resume Writing Development Program
ವೃತ್ತಿಪರ ಸ್ವವಿವರ ಮಾಹಿತಿ ಬರವಣಿಗೆ ಅಭಿವೃದ್ಧಿ ಕಾರ್ಯಕ್ರಮ
ವಿಜಯಪುರ, 11 : ವೃತ್ತಿಪರ ಸ್ವವಿವರ ಮಾಹಿತಿ ಬರವಣಿಗೆ ಅಭಿವೃದ್ಧಿ ಕಾರ್ಯಕ್ರಮ ಬರವಣಿಗೆ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇಂದು ಗುರುವಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡ ಎ.ಎಸ್.ಪಿ ಕಾಮರ್ಸ್ ಕಾಲೇಜಿನ ಎಂ.ಬಿ.ಎ ವಿಭಾಗದ ನಿರ್ದೇಶಕ ಡಾ. ಚಿದಾನಂದ ಬ್ಯಾಹಟ್ಟಿ ಮಾತನಾಡಿ, ವೃತ್ತಿಪರ ಸ್ವವಿವರ ಮಾಹಿತಿ ಬರವಣಿಗೆಯಲ್ಲಿ ಇರಬೇಕಾದ ಘಟಕಾಂಶಗಳ ಕುರಿತು ಸವಿವರವಾಗಿ ಮಾಹಿತಿ ನೀಡಿದರು. ಇದೇ ವೇಳೆ ಪ್ರಶಿಕ್ಷಣಾರ್ಥಿಗಳಿಗೆ ಮಾದರಿ ಬರವಣಿಗೆಯನ್ನು ಯನ್ನು ಸಿದ್ಧಪಡಿಸಿ ತೋರಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯೆ ಡಾ. ಭಾರತಿ ವೈ. ಖಾಸನಿಸ, ಸಹಪ್ರಾಧ್ಯಾಪಕ ಡಾ. ಎಂ. ಎಸ್. ಹಿರೇಮಠ, ಡಾ.ಎಂ.ಬಿ. ಕೋರಿ, ಸಹಾಯಕ ಪ್ರಾಧ್ಯಾಪಕ ಡಾ. ಜೆ.ಎಸ್. ಪಟ್ಟಣಶೆಟ್ಟಿ, ಡಾ. ಬಿ.ಎಸ್. ಹಿರೇಮಠ, ಎಸ್. ಎಸ್. ಪಾಟೀಲ, ಪಿ. ಡಿ ಮುಲ್ತಾನಿ, ಡಾ. ಎಸ್.ಪಿ. ಶೇಗುಣಸಿ, ಮಲ್ಲಯ್ಯ ಎಸ್. ಹಿರೇಮಠ ದೈಹಿಕ ಶಿಕ್ಷಣ ನಿರ್ದೇಶಕ ಎಂ. ಪಿ. ಕುಪ್ಪಿ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.ಪ್ರಶಿಕ್ಷಣಾರ್ಥಿ ವೈಷ್ಣವಿ ಹಡಪದ ನಿರೂಪಿಸಿ, ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 