ವಿವಿಧ ಕಾಮಗಾರಿಗಳನ್ನು ಪರೀಶೀಲಿಸಿದ ಯೋಜನಾ ನಿರ್ದೇಶಕ ರವಿ ಬಂಗಾರ್ಪ
Project Director Ravi Bangarpa inspected various works
ವಿವಿಧ ಕಾಮಗಾರಿಗಳನ್ನು ಪರೀಶೀಲಿಸಿದ ಯೋಜನಾ ನಿರ್ದೇಶಕ ರವಿ ಬಂಗಾರ್ಪ
ರಾಯಬಾಗ, 04 : ತಾಲೂಕಿನ ವಿವಿಧ ಗ್ರಾ.ಪಂಗಳ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿದ್ದ ವಿವಿಧ ಕಾಮಗಾರಿಗಳನ್ನು ಜಿ.ಪಂ ಯೋಜನಾ ನಿರ್ದೇಶಕ ರವಿ ಬಂಗಾರ್ಪ ಅವರು ಮಂಗಳವಾರ ಪರೀಶೀಲಿಸಿದರು. ತಾಲೂಕಿನ ನಸಲಾಪೂರ, ಮೇಖಳಿ, ನಂದಿಕುರಳಿ ಗ್ರಾಪಂಯಲ್ಲಿನ ವಿವಿಧ ಕಾಮಗಾರಿಗಳನ್ನು ಪರೀಶೀಲಿಸಿ, ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಾಲಮಿತಿಯಲ್ಲಿ ಎಲ್ಲ ನರೇಗಾ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಕಾಮಗಾರಿಗಳ ಸ್ಥಳದಲ್ಲಿದ್ದ ಕೂಲಿಕಾರರೊಂದಿಗೆ ಸಂವಾದ ನಡೆಸಿದ ಅವರು, ಕೂಲಿಕಾರರ ಸಮಸ್ಯೆ ಆಲಿಸಿದರು. ಬಳಿಕ ಕೂಲಿಕಾರರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಕದ್ದು, ತಾಂತ್ರಿಕ ಸಂಯೋಜಕ ಅಶೋಕ ಪೂಜಾರಿ, ಐಇಸಿ ಸಂಯೋಜಕ ಮುತ್ತುರಾಜ್ ಗದಾಡಿ ಹಾಗೂ ಗ್ರಾ.ಪಂ ಸಿಬ್ಬಂದಿ ಮತ್ತು ನರೇಗಾ ಕೂಲಿಕಾರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 