ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಪ್ರತಿಭಟನೆ
Protest by Devadasi Women's Liberation Association
ಬಳ್ಳಾರಿ 19: ನಗರದಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಮತ್ತು ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸದ್ದಾರೆ.ಮನವಿಯಲ್ಲಿ ಹಾಕ್ಕೋತಾಯಗಳನ್ನು ಮಾಡಿದ್ದುಎಲ್ಲಾ ದೇವದಾಸಿ ಮಹಿಳೆಯರು ಹಾಗೂ ಅವರ ಮೂರು ತಲೆಮಾರಿನ ಕುಟುಂಬಗಳನ್ನು ಯಾವುದೇ ಷರತ್ತಿಲ್ಲದೆ.ವಯೋಮಿತಿ ಗಮನಿಸದೆ ಸರ್ವೆ ಮಾಡಬೇಕು. 2007ರಲ್ಲಿ ಸರ್ಕಾರವೇ ಸರ್ವೇ ಮಾಡಿದ ದೇವದಾಸಿ ಮಹಿಳೆಯರನ್ನು ವಯೋಮಿತಿ ಹೇರಿ ಸರ್ವೆಯಿಂದ ಹೊರಗಡೆ ಹಿಟ್ಟಿರುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಸರ್ವೆಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರಿಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ತಾಯಿಯ ದೇವದಾಸಿ ದೃಢೀಕರಣ ಪತ್ರ ನೀಡಬೇಕು..
ಎಲ್ಲಾ ದೇವದಾಸಿ ಮಹಿಳೆಯರಿಗೆ ಸಾಲ ಸೌಲಭ್ಯ ಸಹಾಯಧನ 2 ಲಕ್ಷ ರೂಪಾಯಿ ನೀಡಬೇಕು. 2026 ಬಜೆಟ್ ನಲ್ಲಿ ಎಲ್ಲಾ ದೇವದಾಸಿ ಮಹಿಳೆಯರಿಗೆ ಸಹಾಯ ಧನ ಅಥವಾ ಪಿಂಚಣಿಯನ್ನು 10.000ರೂಗಳ ಹೆಚ್ಚಿಸಬೇಕು. ಎಲ್ಲಾ ದೇವದಾಸಿ ಮಕ್ಕಳಿಗೆ ವಿದ್ಯಾಭ್ಯಾಸ ಅನುಸಾರ ಉದ್ಯೋಗ ನೀಡಬೇಕು.ಇಲ್ಲದಿದ್ದರೆ ನಿರುದ್ಯೋಗ ಬತ್ತೆ 10,000 ನೀಡಬೇಕು. ಹೆಚ್ಚು ಜಮೀನು ಹೊಂದಿದ ಕುಟುಂಬಗಳಿಂದ ಕೈಗಾರಿಕೆಗಳಿಗೆ ಭೂ ಸ್ವಾಧೀನ ಮಾಡಿವ ಮಾದರಿಯಲ್ಲಿ.ಸ್ವಾಧೀನ ಮಾಡಿ ತಲ 05 ಎಕರೆ ಭೂಮಿ ನೀಡಬೇಕು. ಎಲ್ಲಾ ದೇವದಾಸಿ ಮಹಿಳೆಯರಿಗೆ ಕೆ.ಎಂ.ಇ.ಆರಿ್ಸ.ಹಣದಿಂದ 80ಥ80 ಜಾಗ ನೀಡಿ12 ಲಕ್ಷ ರೂಪಾಯಿ ಮನೆಗಳನ್ನು ಉಚಿತವಾಗಿ ಕಟ್ಟಿಸಿಕೊಡಬೇಕು.ಮತ್ತು ಉಳಿದ ಜಾಗದಲ್ಲಿ ಹೈನುಗಾರಿಕೆ ಮಾಡಿಕೊಳ್ಳುವುದಕ್ಕೆ 5 ಲಕ್ಷ ಸಹಾಯಧನ ನೀಡಬೇಕು
ಮದುವೆ ಸಹಾಯ ಧನಕ್ಕೆ ಅರ್ಜಿ ಹಾಕಿದ ದೇವದಾಸಿ ಮಕ್ಕಳಿಗೆ ಒಂದು ವರ್ಷದಲ್ಲಿ ಹಣ ಬಿಡುಗಡೆ ಮಾಡಬೇಕು. .ನರೇಗಾ ಉಳಿ.ವಿಬಿ ಗ್ರಾಮ್ಮಿ ರದ್ದುಪಡಿಸಿ ಉದ್ಯೋಗ ಖಾತ್ರಿಯಲ್ಲಿ 200 ದಿನಗಳ ಕೆಲಸ ನೀಡಬೇಕು ಕೂಲಿ 1000 ಸಾವಿರ ರೂಪಾಯಿ ನೀಡಬೇಕು 2025ರ ವಿದ್ಯುತ್ ಮಸೂದೆ ವಾಪಸ್ ಪಡೆಯಬೇಕು. ಹಾಗೂ ಗಣಿ ಭಾದ್ಯತಾ ಜಿಲ್ಲೆಗಳ ದೇವದಾಸಿ ಮಹಿಳೆಯರ ವಸತಿ ಸೌಕರ್ಯಕ್ಕೆ ಅಗತ್ಯವಾದ ಹಣವನ್ನು ಸಂಬಂಧಿಸಿದ ನಿಧಿಯ ಮೂಲಕ ಒದಗಿಸಬೇಕು ಯಾವುದೇ ಕಾರಣಕ್ಕೂ ಆ ಸೌಕರ್ಯ ಒದಗಿಸಲು ಯಾವುದೇ ಸ್ವಯಂ ಸೇವಾ ಸಂಸ್ಥೆಗಳಿಗೆ ವಹಿಸಿಕೊಡದೇ ನೇರ ಸಂಬಂಧಿಸಿ ದ ಇಲಾಖೆಯ ಮೂಲಕ ಕ್ರಮ ವಹಿಸಬೇಕು ಎಂದರು.ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಈರಮ್ಮ, ಜಿಲ್ಲಾ ಕಾರ್ಯದರ್ಶಿ ಎ ಸ್ವಾಮಿ ಮಾರಮ್ಮ ಸಂಡೂರು ತಾಲೂಕು ಅಧ್ಯಕ್ಷರು ಹೆಚ್ಚು ದುರುಗಮ್ಮ ಸಂಡೂರು ತಾಲೂಕು ಕಾರ್ಯದರ್ಶಿ ಸಿ ವೀರೇಶ ಕುರುಗೋಡು ತಾಲೂಕು ಕಾರ್ಯದರ್ಶಿ ಹುಲಿಗೆಮ್ಮ ಸಂಡೂರು ತಾಲೂಕು ಉಪಾಧ್ಯಕ್ಷರು, ಇತರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 