ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ: ಬಾರ್ ಅಸೋಸಿಯೇಶನ್ ಬೆಂಬಲ
Protest demanding sugarcane price fixing: Bar Association supports
ಬೆಳಗಾವಿ 04: ಕಬ್ಬಿಗೆ ರೂ. 3500 ದರ ನಿಗದಿಪಡಿಸಲು ಆಗ್ರಹಿಸಿ ಕೈಗೊಂಡಿರುವ ರೈತರ ಹೋರಾಟಕ್ಕೆ ಬೆಳಗಾವಿ ಬಾರ್ ಅಸೋಸಿಯೇಶನ್ ಬೆಂಬಲವನ್ನು ಸೂಚಿಸುವುದರ ಮೂಲಕ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು. ರೈತರು ಬೆಳೆದ ಕಬ್ಬಿನ ದರವನ್ನು 3500 ರೂ. ನಿಗದಿಸಿ ಎಂದು ಬೆಳಗಾವಿ ಬಾರ್ ಅಸೋಸಿಯೇಶನ್ ವಕೀಲರು ರೈತರ ಹೋರಾಟಕ್ಕೆ ಬೆಂಬಲವನ್ನು ಸೂಚಿಸುವುದರ ಮೂಲಕ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಪ್ರಸ್ತುತ ಕರ್ನಾಟಕ ರಾಜ್ಯದ ಸಕ್ಕರೆ ಕಾರ್ಖಾನೆಗಳು ನೀಡುವ ದರ ರೈತರ ಬೆಳೆಗೆ ತಕ್ಕ ಪ್ರತಿಫಲವಲ್ಲ ಇದರಿಂದ ರೈತರು ಸಾಕಷ್ಟು ಆರ್ಥಿಕ ನಷ್ಟವನ್ನು ಅನುಭವಿಸುತ್ತಿದ್ದಾರೆ. ಪ್ರತಿ ಟನ ಕಬ್ಬಿನ ದರವನ್ನು 3500 ರೂ. ಗೆ ನಿಗದಿ ಪಡಿಸಬೇಕು ಎಂದು ಬೆಳಗಾವಿ ಬಾರ್ ಅಸೋಸಿಯೇಶನ ವಕೀಲರು ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿ ಪ್ರತಿಭಟಿಸಿದರು. ಗುರ್ಲಾಪೂರದಲ್ಲಿ ರೈತಪರ ಸಂಘಟನೆಗಳು ಕಳೆದ 4-5 ದಿನಗಳಿಂದ ನಿರಂತರವಾಗಿ ಹೋರಾಟವನ್ನು ಕೈಗೊಂಡಿದ್ದಾರೆ. ಆದರೆ ಸರ್ಕಾರ ಇದ್ಯಾವುದಕ್ಕೂ ಸ್ಪಂದಿಸದೆ ನಿರ್ಲಕ್ಷಿಸುತ್ತಿದೆ. ಆದಕಾರಣ ಅತಿ ಶೀಘ್ರದಲ್ಲಿ ಕಬ್ಬಿನ ದರವನ್ನು ನಿಗದಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರಹೋರಾಟ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಬಾರ್ ಅಸೋಸಿಯೇಶನ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಬಾರ ಅಸೋಸಿಯೇಶನ ಅಧ್ಯಕ್ಷ ಬಿ.ಎಂ. ಮುಗಳಿ ಸೇರಿದಂತೆ ರೈತಪರ ಹೋರಾಟಗಾರರು, ವಕೀಲರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 