ಕಬ್ಬಿಗೆಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
Protest demanding support price for sugarcane
ಯರಗಟ್ಟಿ, 31 : ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತಸಂಘದಿಂದ ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ.ರೈತ ಸಂಘದ ತಾಲೂಕಾ ಕಾರ್ಯಾಅಧ್ಯಕ್ಷ ರಾಮಕೃಷ್ಣ ಎಳ್ಳಮ್ಮಿ ಮಾತನಾಡಿ ಪ್ರತಿ ಟನ್ ಕಬ್ಬಿಗೆ ?4000 ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿದರು.
ಬೆಂಬಲ ಬೆಲೆ ಘೋಷಣೆ ಮಾಡಿದೆ ಇದ್ದಲ್ಲಿ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರಂತರ ಪ್ರತಿಭಟನೆ ಮಾಡಲಾಗುವುದು. ಹೆಚ್ಚುತ್ತಿರುವ ಗೊಬ್ಬರ ಹಾಗೂ ಕಾರ್ಮಿಕರ ವೇತನದ ವೆಚ್ಚದಿಂದಾಗಿ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ರೈತ ಸಂಘದ ನಾಯಕರು ಆಗ್ರಹಿಸಿದರು.
ಈ ವೇಳೆ ವಿಶಾಲಗೌಡ ಪಾಟೀಲ, ಸಂತೋಷ ದೇವರಡ್ಡಿ, ಗಿರೇಪ್ಪ ಗಂಗರೆಡ್ಡಿ, ಕಾಂತು ಜಕಾತಿ, ಸಂತೋಷ ಹಾದಿಮನಿ, ಮಲ್ಲಿಕಾರ್ಜುನ ಹೊನ್ನಾಳ, ಮುದಕಪ್ಪ ಕಾಮಣ್ಣವರ, ಬೀರ್ಪ ಬನ್ನೂರು, ಶ್ರೀಶೈಲ ದಿಡಗನ್ನವರ, ಆದಮ್ಮ ಬಳಿಗಾರ, ಮಲಿಕ ಜಮಾದಾರ, ಯಮನಪ್ಪ ಮಾಳಗಿ, ಹನಮಂತ ಬಿಲ್ಲೋಡಿ, ವೆಂಕಪ್ಪ ಹುಲಕುಂದ, ಇಮಾಮಸಾಬ ಶಿಕ್ಕಲಗಿ, ಆನಂದ ಬಾವಿಹಾಳ, ಹೊಳೆಪ್ಪ ದೇವರಡ್ಡಿ, ಸುಭಾಷ ಇಟ್ನಾಳ, ನಾಗಪ್ಪ ಲತ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 