ಹೆಚ್ ಎಲ್ ಸಿ ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ
Protest demanding to release water to HLC canal
ಹೆಚ್ ಎಲ್ ಸಿ ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ
ಬಳ್ಳಾರಿ 06: ಎಐಕೆಕೆಎಂಎಸ್ ರೈತ ಸಂಘಟನೆ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಚ್.ಎಲ್.ಸಿ ಕಾಲುವೆಗೆ ಕನಿಷ್ಠ 20 ದಿನ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ ಮಾಡಿ ಮಾನ್ಯ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯ ಜಿಲ್ಲಾ ಅಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ ಮತ್ತು ಎಐಕೆಕೆಎಂಎಸ್ ರೈತ ಸಂಘಟನೆ ಯ ಜಿಲ್ಲಾ ಅಧ್ಯಕ್ಷ ಗೋವಿಂದ್ ಅವರಿಬ್ಬರು ಮಾತನಾಡುತ್ತಾ ಈ ಬಾಗದ ರೈತರು ಜೋಳ, ಮೆಕ್ಕೆಜೋಳ, ಸಜ್ಜೆ, ಹಲಸಂದೆ, ಮೆಣಸಿನಕಾಯಿ ಸೇರಿದಂತೆ ಇತರ ಬೆಳೆ ಬೆಳೆಯುತ್ತಿದ್ದಾರೆ. ಇವರಿಗೆ ಈ ಬೆಳೆ ಕೈ ಸೇರಲು ಇನ್ನು ಸುಮಾರು 20 ದಿನ ನೀರು ಬೇಕಾಗಿದೆ, ಹಾಗಾಗಿ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ರೈತರ ಹಿತದೃಷ್ಟಿಯಿಂದ ಈ ತಿಂಗಳ ಪೂರ್ಣ ಎಚ್ ಎಲ್ ಸಿ ಕಾಲುವೆಗೆ ನೀರು ಹರಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಐಕೆಕೆಎಂಎಸ್ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ರೈತರಾದ ಈಶ್ವರ್ ಗೌಡ ಬಸವರಾಜ್, ಗಾದಿಲಿಂಗ, ಓಂಕಾರ, ಸ್ವಾಮಿ, ಬಸವರಾಜ್, ತುಳಸಪ್ಪ ಇನ್ನಿತರು ಇನ್ನಿತರರು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 