ಹೆಚ್ ಎಲ್ ಸಿ ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ

ಹೆಚ್ ಎಲ್ ಸಿ ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ Protest demanding to release water to HLC canal

ಹೆಚ್ ಎಲ್ ಸಿ ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ 

ಬಳ್ಳಾರಿ 06: ಎಐಕೆಕೆಎಂಎಸ್ ರೈತ ಸಂಘಟನೆ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಚ್‌.ಎಲ್‌.ಸಿ ಕಾಲುವೆಗೆ ಕನಿಷ್ಠ 20 ದಿನ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ ಮಾಡಿ ಮಾನ್ಯ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯ ಜಿಲ್ಲಾ ಅಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ ಮತ್ತು ಎಐಕೆಕೆಎಂಎಸ್ ರೈತ ಸಂಘಟನೆ ಯ ಜಿಲ್ಲಾ ಅಧ್ಯಕ್ಷ ಗೋವಿಂದ್ ಅವರಿಬ್ಬರು ಮಾತನಾಡುತ್ತಾ ಈ ಬಾಗದ ರೈತರು ಜೋಳ, ಮೆಕ್ಕೆಜೋಳ, ಸಜ್ಜೆ, ಹಲಸಂದೆ, ಮೆಣಸಿನಕಾಯಿ ಸೇರಿದಂತೆ ಇತರ ಬೆಳೆ ಬೆಳೆಯುತ್ತಿದ್ದಾರೆ.  ಇವರಿಗೆ ಈ ಬೆಳೆ ಕೈ ಸೇರಲು ಇನ್ನು ಸುಮಾರು 20 ದಿನ ನೀರು ಬೇಕಾಗಿದೆ, ಹಾಗಾಗಿ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ರೈತರ ಹಿತದೃಷ್ಟಿಯಿಂದ ಈ ತಿಂಗಳ ಪೂರ್ಣ ಎಚ್ ಎಲ್ ಸಿ ಕಾಲುವೆಗೆ ನೀರು ಹರಿಸಬೇಕೆಂದು  ಆಗ್ರಹಿಸಿದರು. 

ಈ ಸಂದರ್ಭದಲ್ಲಿ ಎಐಕೆಕೆಎಂಎಸ್ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ರೈತರಾದ ಈಶ್ವರ್ ಗೌಡ ಬಸವರಾಜ್, ಗಾದಿಲಿಂಗ, ಓಂಕಾರ, ಸ್ವಾಮಿ, ಬಸವರಾಜ್, ತುಳಸಪ್ಪ ಇನ್ನಿತರು ಇನ್ನಿತರರು ಭಾಗವಹಿಸಿದ್ದರು.