ಪಂಚಾಯತ್ ನೌಕರರ ಬೇಡಿಕೆಗೆ ಡಿ.20ಕ್ಕೆ ಬೆಂಗಳೂರು ನಲ್ಲಿ ಪ್ರತಿಭಟನೆ
Protest in Bengaluru on December 20 for the demands of Panchayat employees
ಹೂವಿನಹಡಗಲಿ 17: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಇದೇ ತಿಂಗಳು 20ರಂದು ಬೆಂಗಳೂರು ನಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಗ್ರಾ.ಪಂ.ನೌಕರರ ಸಂಘದ ಜಿಲ್ಲಾದ್ಯಕ್ಷ ಆರ್.ಎಸ್. ಬಸವರಾಜ ತಿಳಿಸಿದರು.ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ’ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಕ್ಲರ್ಕ, ಡಾಟಾ ಎಂಟ್ರಿ ಆಪರೇಟರ್, ನಿರುಗಂಟಿಗಳು, ಜವಾನ, ಸ್ವಚ್ಛತಾಗಾರರಿಗೆ ಕಾರ್ಮಿಕರ ಬಿಪಿಎಲ್ ಕಾರ್ಡ್ ರದ್ದು ಪಡಿಸದೆ ಸರ್ಕಾರಕನಿಷ್ಠ ವೇತನ ?36 ಸಾವಿರ ರೂ.ನಿಗದಿ ಪಡಿಸಿ,ಪಂಚಾಯತ್ ನೌಕರರ ನಿವೃತ್ತಿ ನಂತರ ? 10 ಲಕ್ಷ ರೂ.ಇಡಗಂಟು ಕೊಡಿ ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.20ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಸತ್ಯಾಗ್ರಹ ನಡೆಸುವುದಾಗಿ ಹೇಳಿದ ಅವರು 22ರಂದು ಮುಖ್ಯಮಂತ್ರಿ ಮನೆ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು. ಪಂಚಾಯತ್ ನೌಕರರ ಸಂಘದ ಪ್ರಧಾನ ಕಾರ್ಯ ದರ್ಶಿ ನಾಗಭೂಷಣ ರೆಡ್ಡಿ, ತಾಲ್ಲೂಕು ಕಾರ್ಯ ದರ್ಶಿ ಮಹಮ್ಮದ್,ಸತೀಶ, ಹೇಮಾವತಿ, ನಾಗಯ್ಯ, ಸುಧಾ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 