ಪಂಚಾಯತ್ ನೌಕರರ ಬೇಡಿಕೆಗೆ ಡಿ.20ಕ್ಕೆ ಬೆಂಗಳೂರು ನಲ್ಲಿ ಪ್ರತಿಭಟನೆ
Protest in Bengaluru on December 20 for the demands of Panchayat employees
ಹೂವಿನಹಡಗಲಿ 17: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಇದೇ ತಿಂಗಳು 20ರಂದು ಬೆಂಗಳೂರು ನಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಗ್ರಾ.ಪಂ.ನೌಕರರ ಸಂಘದ ಜಿಲ್ಲಾದ್ಯಕ್ಷ ಆರ್.ಎಸ್. ಬಸವರಾಜ ತಿಳಿಸಿದರು.ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ’ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಕ್ಲರ್ಕ, ಡಾಟಾ ಎಂಟ್ರಿ ಆಪರೇಟರ್, ನಿರುಗಂಟಿಗಳು, ಜವಾನ, ಸ್ವಚ್ಛತಾಗಾರರಿಗೆ ಕಾರ್ಮಿಕರ ಬಿಪಿಎಲ್ ಕಾರ್ಡ್ ರದ್ದು ಪಡಿಸದೆ ಸರ್ಕಾರಕನಿಷ್ಠ ವೇತನ ?36 ಸಾವಿರ ರೂ.ನಿಗದಿ ಪಡಿಸಿ,ಪಂಚಾಯತ್ ನೌಕರರ ನಿವೃತ್ತಿ ನಂತರ ? 10 ಲಕ್ಷ ರೂ.ಇಡಗಂಟು ಕೊಡಿ ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.20ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಸತ್ಯಾಗ್ರಹ ನಡೆಸುವುದಾಗಿ ಹೇಳಿದ ಅವರು 22ರಂದು ಮುಖ್ಯಮಂತ್ರಿ ಮನೆ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು. ಪಂಚಾಯತ್ ನೌಕರರ ಸಂಘದ ಪ್ರಧಾನ ಕಾರ್ಯ ದರ್ಶಿ ನಾಗಭೂಷಣ ರೆಡ್ಡಿ, ತಾಲ್ಲೂಕು ಕಾರ್ಯ ದರ್ಶಿ ಮಹಮ್ಮದ್,ಸತೀಶ, ಹೇಮಾವತಿ, ನಾಗಯ್ಯ, ಸುಧಾ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 