ಯರಗಟ್ಟಿಯಲ್ಲಿ ಕಬ್ಬಿನ ಬೆಲೆ ಏರಿಕೆಗೆ ಆಗ್ರಹಿಸಿ ಪ್ರತಿಭಟನೆ
Protest in Yaragati demanding increase in sugarcane prices
ಯರಗಟ್ಟಿ, 04 : ರೈತ ಬೆಳೆದ ಕಬ್ಬಿಗೆ 3500 ಬೆಲೆ ಗೋಸಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಭಾರತೀಯ ಕೃಷಿ ಸಮಾಜ, ಆಲ್ ಇಂಡಿಯಾ ಕಿಸಾನ್ ಕೇತ್ ಸಂಘಟನೆ, ಯರಗಟ್ಟಿ ಹಾಗೂ ಕೂಲಿ ಕಾರ್ಮಿಕರ ಸಂಘಟನೆ ಮತ್ತು ರೈತ ಹಿತ ರಕ್ಷಣಾ ವೇದಿಕೆ ಇವರಿಂದ ಯರಗಟ್ಟಿ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತಿದಲ್ಲಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹಾಗೂ ಸರ್ಕಾರಕ್ಕೆ ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬಾಗೋಜಿಕೊಪ್ಪದ ಡಾ. ಶಿವಲಿಂಗ ಮುರುಘೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದ ಅವರು "ರೈತ ಎಂದರೆ ಅನ್ನದಾತ" ಏಕೆಂದರೆ ಅವರು ತಮ್ಮ ಕಠಿಣ ಪರಿಶ್ರಮದ ಮೂಲಕ ಬೆಳೆಗಳನ್ನು ಬೆಳೆದು, ಪ್ರತಿಯೊಬ್ಬರಿಗೂ ಆಹಾರವನ್ನು ಒದಗಿಸುತ್ತಾರೆ. ಅನ್ನದಾತ ಎಂದರೆ "ಅನ್ನವನ್ನು ಕೊಡುವವನು" ಎಂದರ್ಥ, ಮತ್ತು ರೈತರು ದೇಶದ ಆರ್ಥಿಕತೆಯ ಅಡಿಪಾಯವಾಗಿದ್ದು, ಅವರು ನೀಡುವ ಆಹಾರದಿಂದ ನಮ್ಮೆಲ್ಲರ ಜೀವನ ಸಾಧ್ಯ ಅಂತಾ ರೈತನಿಗೆ ಇಂದು ಸಂಕಷ್ಟ ಎದುರಾಗಿದೆ ಅವರು ಬೆಳೆದ ಬೆಳೆಗೆ ಸೂಕ್ತ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿದರು. ನಂತರ ರೈತ ಮುಖಂಡ ಪಂಚನಗೌಡ ದ್ಯಾಮನಗೌಡರ ಮಾತನಾಡಿದ ಅವರು "ರೈತ ದೇಶದ ಬೆನ್ನೆಲುಬು" ಎನ್ನುವ ಸರಕಾರ ಕೂಡಲೇ ಎಚ್ಚೆತ್ತ ಕಬ್ಬಿಗೆ 3500 ಬೆಂಬಲ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿ ಇಂದು ರಸ್ತೆ ಬಂದ್ ಮಾಡಿ ಪ್ರತಿಭೆ ಪ್ರಾರಂಭವಾಗಿದೆ ಮುಂಬರುವ ದಿನಗಳಲ್ಲಿ ತಹಶೀಲ್ದಾರ ಕಚೇರಿ, ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ, ಸಬ್ ರಿಜಿಸ್ಟರ್ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಾಗೋಜಿಕೊಪ್ಪದ ಡಾ. ಶಿವಲಿಂಗ ಮುರುಘೇಂದ್ರ ಶಿವಾಚಾರ್ಯ ಸ್ವಾಮೀಜಿ, ಸತ್ತಿಗೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕೆ.ಶಿವಾಪೂರದ ಮರಳುಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ರಾಜರಾಜೇಶ್ವರಿ ಆಶ್ರಮದ ಗಣಪತಿ ಮಹಾರಾಜರು, ರೈತ ಮುಖಂಡರಾದ ವೆಂಕಟೇಶ ದೇವರಡ್ಡಿ, ಪಂಚನಗೌಡ ದ್ಯಾಮನಗೌಡರ, ವಿಶಾಲಗೌಡ ಪಾಟೀಲ, ಯಲ್ಲಪ್ಪಗೌಡ ಪಾಟೀಲ, ಮಹಾಂತೇಶ ತೋಟಗಿ, ಪುಂಡಲೀಕ ಮೇಟಿ, ಮಹಾದೇವ ಯಂಡ್ರಾವಿ, ಬಸವರಾಜ ಬಿಜ್ಜೂರ, ರಾಷ್ಟ್ರೀಯ ರೈತ ಸಂಘದ ರಾಷ್ಟ್ರಾಧ್ಯಕ್ಷ ಶಿವಲಿಂಗಪ್ಪ ನುಗ್ಗಾನಟ್ಟಿ, ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸೋಮು ರೈನಾಪೂರಜಿಲ್ಲಾ ಸಂಚಾಲಕ ರವಿ ನಾಡಗೌಡರ, ಲಕ್ಕಪ್ಪ ಬಿಜ್ಜನವರ, ತುಕಾರಾಂ ನಾಯ್ಕರ, ಯಂಕಣ್ಣಾ ಹುರಕನ್ನವರ, ರಾಯಣ್ಣಾ ಯರಗಟ್ಟಿ, ನ್ಯಾಯವಾದಿಗಳಾದ ಸಿ. ಬಿ. ಯಡಳ್ಳಿ, ವಾಯ್. ಬಿ. ನರಿ, ಮಾಜಿ ಸೈನಿಕರಾದ ಕುಮಾರ ಹಿರೇಮಠ, ಮುತ್ತು ವೀರಾಪೂರ ಸೇರಿದಂತೆ ನೂರಾರು ರೈತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 