ನೇಕಾರರಿಗೆ ಸಮರ್ಕ ಯೋಜನೆ ಒದಗಿಸಿ: ಶಿವಲಿಂಗ ಟಿರಕಿ
Provide a strategic plan for weavers: Shivalinga Tiraki
ಮಹಾಲಿಂಗಪುರ 17: ಮುಂಬರುವ ಬಜೆಟ್ ನಲ್ಲಿ ನೇಕಾರರಿಗೆ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಸಭೆ ನಡೆಸಿ, ಕೈಮಗ್ಗ ಮತ್ತು ಜವಳಿ ಅಭಿವೃದ್ಧಿ ಇಲಾಖೆಗೆ 1500 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿ ಸಮರ್ಕ ಯೋಜನೆಗಳನ್ನು ಒದಗಿಸಬೇಕೆಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಒತ್ತಾಯಿಸಿದರು. ಪಟ್ಟಣದ ಪುರಸಭೆ ಮುಖ್ಯಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಮೊದಲು ನೇಕಾರರೊಂದಿಗೆ ಪೂರ್ವ ನಿಯೋಜಿತ ಸಭೆ ನಡೆಸಲಿ. ನಂತರ ಇಲಾಖೆಯಲ್ಲಿ ಖಾಲಿ ಇರುವ 55 ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ರಾಜ್ಯದ ಕಟ್ಟಕಡೆಯ ವೃತ್ತಿಪರ ನೇಕಾರರಿಗೆ ಸೇವೆ ಒದಗಿಸಿ, ನೇಕಾರರ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಸೋಮವಾರ ದಿ.19 ರಂದು ಕೈಮಗ್ಗ ಮತ್ತು ಜವಳಿ ಅಭಿವೃದ್ಧಿ ಆಯುಕ್ತರ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಮತ್ತು ಉಗ್ರ ಹೋರಾಟಕ್ಕೆ ಸಿದ್ಧತೆ ಮಾಡಲಾಗಿದೆ ಎಂದರು. ರಾಜೇಂದ್ರ ಮಿರ್ಜಿ, ರಮೇಶ ನಾಗರಾಳ, ಮಹಾಲಿಂಗಪ್ಪ ನಂದಿಕೋಲ, ಬಸವರಾಜ ಅಮ್ಮಣಗಿ, ಜಯವಂತ ಮೂಡಲಗಿ, ರಾಘವೇಂದ್ರ ಬೆಳಗಲಿ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 