ನೇಕಾರರಿಗೆ ಸಮರ್ಕ ಯೋಜನೆ ಒದಗಿಸಿ: ಶಿವಲಿಂಗ ಟಿರಕಿ
Provide a strategic plan for weavers: Shivalinga Tiraki
ಮಹಾಲಿಂಗಪುರ 17: ಮುಂಬರುವ ಬಜೆಟ್ ನಲ್ಲಿ ನೇಕಾರರಿಗೆ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಸಭೆ ನಡೆಸಿ, ಕೈಮಗ್ಗ ಮತ್ತು ಜವಳಿ ಅಭಿವೃದ್ಧಿ ಇಲಾಖೆಗೆ 1500 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿ ಸಮರ್ಕ ಯೋಜನೆಗಳನ್ನು ಒದಗಿಸಬೇಕೆಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಒತ್ತಾಯಿಸಿದರು. ಪಟ್ಟಣದ ಪುರಸಭೆ ಮುಖ್ಯಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಮೊದಲು ನೇಕಾರರೊಂದಿಗೆ ಪೂರ್ವ ನಿಯೋಜಿತ ಸಭೆ ನಡೆಸಲಿ. ನಂತರ ಇಲಾಖೆಯಲ್ಲಿ ಖಾಲಿ ಇರುವ 55 ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ರಾಜ್ಯದ ಕಟ್ಟಕಡೆಯ ವೃತ್ತಿಪರ ನೇಕಾರರಿಗೆ ಸೇವೆ ಒದಗಿಸಿ, ನೇಕಾರರ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಸೋಮವಾರ ದಿ.19 ರಂದು ಕೈಮಗ್ಗ ಮತ್ತು ಜವಳಿ ಅಭಿವೃದ್ಧಿ ಆಯುಕ್ತರ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಮತ್ತು ಉಗ್ರ ಹೋರಾಟಕ್ಕೆ ಸಿದ್ಧತೆ ಮಾಡಲಾಗಿದೆ ಎಂದರು. ರಾಜೇಂದ್ರ ಮಿರ್ಜಿ, ರಮೇಶ ನಾಗರಾಳ, ಮಹಾಲಿಂಗಪ್ಪ ನಂದಿಕೋಲ, ಬಸವರಾಜ ಅಮ್ಮಣಗಿ, ಜಯವಂತ ಮೂಡಲಗಿ, ರಾಘವೇಂದ್ರ ಬೆಳಗಲಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 