ಸಂರಕ್ಷಿಸಿದ ಬೀದಿನಾಯಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ -ಜಿಲ್ಲಾಧಿಕಾರಿ ದಾನಮ್ಮನವರ
Provide basic facilities to rescued stray dogs - District Magistrate Danammavara
ಹಾವೇರಿ 19 : ಮನುಷ್ಯನಿಗೆ ಉತ್ತಮ ಆಹಾರ ಎಷ್ಟು ಮುಖ್ಯವಾಗಿದೆಯೋ ಹಾಗೆಯೇ ಈ ಸ್ವಾನಗಳಿಗೂ ಸಹ ಮೂಲಭೂತ ಸೌಕರ್ಯ ಮತ್ತು ಗುಣಮಟ್ಟದ ಚಿಕಿತ್ಸೆ ಅವಶ್ಯವಾಗಿದೆ. ಶ್ವಾನಗಳಲಿಗೆ ಮೂಲಭೂತ ಸೌಕರ್ಯ ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಹಾವೇರಿ ನಗರದ ಎ.ಪಿ.ಎಂ.ಸಿ ಆವರಣದಲ್ಲಿ ಶುಕ್ರವಾರ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರ ಆಶ್ರಯದ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ ಆದೇಶದ ಮೇರೆಗೆ ಜಿಲ್ಲೆಯಲ್ಲಿ ವಿಶೇಷವಾಗಿ 10 ಸ್ಥಳೀಯ ಸಂಸ್ಥೆಗಳ ವಿಭಾಗದಲ್ಲಿ ಬೀದಿ ನಾಯಿಗಳ ಸಂತಾನ ಹರಣದ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
ಈಗಾಗಲೇ ಬ್ಯಾಡಗಿ, ಹಾನಗಲ್, ಹಾವೇರಿ ಹಾಗೂ ರಾಣೇಬೆನ್ನೂರ ಸೇರಿ ನಾಲ್ಕು ಸ್ಥಳಗಳಲ್ಲಿ ಪ್ರಾರಂಭವಾಗಿದ್ದು, 400ಕ್ಕೂ ಹೆಚ್ಚು ಬೀದಿನಾಯಿಗಳ ಸಂರಕ್ಷಣೆಯನ್ನು ಮಾಡಲಾಗಿದೆ. ಶೀಘ್ರದಲ್ಲೇ ಶಿಗ್ಗಾಂವ ಮತ್ತು ಉಳಿದ ತಾಲೂಕುಗಳಲ್ಲಿ ಆರಂಭಿಸಲಾಗುವುದು.
ವಿವಿಧ ಸಂಸ್ಥೆಗಳಲ್ಲಿ, ಕ್ರೀಡಾಂಗಣ, ಶಿಕ್ಷಣ ಸಂಸ್ಥೆಗಳ ಆವರಣ, ಆಸ್ಪತ್ರೆ ಆವರಣ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಅವುಗಳನ್ನು ಹಿಡಿದು ಸಂರಕ್ಷಿಸಿ ಉತ್ತಮವಾದ ಶಸ್ತ್ರಚಿಕಿತ್ಸೆ ನೀಡುವುದು ಅವಶ್ಯವಾಗಿದೆ.
ಇಂದಿನ ದಿನಗಳಲ್ಲಿ ಬೀದಿ ನಾಯಿಗಳು ಮಕ್ಕಳು ಮತ್ತು ಮಹಿಳೆಯರ ಮೇಲೆ ದಾಳಿ ಮಾಡಿದ್ದು ವರದಿಯಾಗಿದೆ. ಇದಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡಿದೆ ಎಂದು ಹೇಳಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಶಿವಯೋಗಿ ಯಲಿ, ನಗರಸಭೆ ಆಯುಕ್ತ ಕಾಂತರಾಜ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 