ಮಕ್ಕಳಿಗೆ ಬಿಸಿಯೂಟ ರುಚಿ-ಶುಚಿಯಾದ ಪೌಷ್ಠಿಕ ಆಹಾರ ಒದಗಿಸಿ: ಡಾ.ಈಶ್ವರ ಉಳ್ಳಾಗಡ್ಡಿ
Provide hot meals, tasty, clean and nutritious food to children: Dr. Ishwara Ullagadi
ಬೆಳಗಾವಿ 25: ಶಾಲಾ ಶಿಕ್ಷಣ ಇಲಾಖೆ, ಬೆಳಗಾವಿ ವಿಭಾಗದ ಅಪರ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಇವರು ದಿನಾಂಕ: 25-11-2025 ರಂದು ಸರ್ಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆ, ಕೆಂಗಾನೂರ. ತಾ: ಬೈಲಹೊಂಗಲ ಜಿ: ಬೆಳಗಾವಿ ಇಲ್ಲಿಗೆ ಸಂದರ್ಶನ ನೀಡಿದರು. ವಿದ್ಯಾರ್ಥಿಗಳ ಕಲಿಕೆಯನ್ನು ವರ್ಗವಾರು ಮತ್ತು ವಿದ್ಯಾರ್ಥಿವಾರು ಪರೀಶೀಲನೆ ಮಾಡಿದರು.
ಎಸ್.ಎಸ್.ಎಲ್.ಸಿ ಪಲಿತಾಂಶ ಸುಧಾರಣೆಗಾಗಿ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು.ಎಲ್ಲಾ ಮಕ್ಕಳು ಆರಂಭಿಕ ಸಾಕ್ಷರತೆ ಮತ್ತು ಸಂಖ್ಯಾ ಸಾಮರ್ಥ್ಯವನ್ನು ಗಳಿಸುವಂತೆ ಎಲ್ಲಾ ಶಿಕ್ಷಕರು ಕ್ರಮವಹಿಸಲು ಸೂಚಿಸಿದರು. ಮಕ್ಕಳೊಂದಿಗೆ ಬಿಸಿಯೂಟವನ್ನು ಸವಿದು ರುಚಿ-ಶುಚಿಯಾದ ಆಹಾರ ಪೂರಕ ಪೌಷ್ಠಿಕ ಆಹಾರ ಒದಗಿಸಲು ತಿಳಿಸಿದರು.ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ಗಮನಹರಿಸಲು ತಿಳಿಸಲಾಯಿತು.
ಮಕ್ಕಳು ಗೈರಾಗದಂತೆ ಟ್ರ್ಯಾಕಿಂಗ್ ಮಾಡಲು ತಿಳಿಸಿದರು. ಪ್ರತಿಯೊಂದು ಮಗುವಿನ ಕಲಿಕೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸುವಲ್ಲಿ ಪ್ರತಿಯೊಬ್ಬ ಶಿಕ್ಷಕರು ಶ್ರಮವಹಿಸುವಂತೆ ತಿಳಿಸಿದರು. ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ಪಡೆಯಲು ಶಿಕ್ಷಕರು ಕೆಲಸ ಮಾಡಬೇಕು ಇಲ್ಲಾವಾದಲ್ಲಿ ನಿಯಮಾನುಸಾರ ಸೂಕ್ತಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 