ವಚನ ದರ್ಶನ ಕಾರ್ಯಕ್ರಮದ ಅಂಗವಾಗಿ ವಿವಿಧ ಗ್ರಾಮಗಳಲ್ಲಿ ಜನಜಾಗೃತಿ ಪಾದಯಾತ್ರೆ
Public awareness walk in various villages as part of Vachana Darshan programme
ವಚನ ದರ್ಶನ ಕಾರ್ಯಕ್ರಮದ ಅಂಗವಾಗಿ ವಿವಿಧ ಗ್ರಾಮಗಳಲ್ಲಿ ಜನಜಾಗೃತಿ ಪಾದಯಾತ್ರೆ
ಗದಗ 11: ತಾಲ್ಲೂಕಿನ ಶ್ರೀಕ್ಷೇತ್ರ ಹರ್ತಿ ಗ್ರಾಮದಲ್ಲಿ ವಚನ ದರ್ಶನ ಆಧ್ಯಾತ್ಮಿಕ ಪ್ರವಚನದ ಅಂಗವಾಗಿ ಹಿರೇವಡ್ಡಟ್ಟಿಹಿಮಣಕವಾಡ ದೇವಮಂದಿರ ಮಹಾಮಠದ ಪೂಜ್ಯಶ್ರೀ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು ಹರ್ತಿ ಗ್ರಾಮ ಸೇರಿದಂತೆ ಕಣವಿ, ಹೊಸೂರು, ಸೊರಟೂರ, ನಾಗಾವಿ, ಯಲಿಶಿರುಂದ, ಕುರ್ತಕೋಟಿ, ಚಿಂಚಲಿ ಗ್ರಾಮಗಳಲ್ಲಿ ಜನಜಾಗೃತಿ ಪಾದಯಾತ್ರೆ ನಡೆಸಿದರು.
ಈ ಪಾದಯಾತ್ರೆಯೂದ್ದಕ್ಕು ಬೆಳಗಿನ ಜಾವದಲ್ಲಿ ರಸ್ತೆಯ ತುಂಬಾ ರಂಗೋಲಿ, ಮನೆಗಳಿಗೆ ತಳಿರು-ತೋರಣ ಮತ್ತು ದೀಪಗಳಿಂದ ಶೃಂಗರಿಸಿ ಡೊಳ್ಳು, ನಂದಿಕೋಲು, ಭಜನೆ ಮೂಲಕ ಶ್ರೀಗಳನ್ನು ಸಾವಿರಾರು ಭಕ್ತರು ಭಕ್ತಿ-ಭಾವದಿಂದ ಬರಮಾಡಿಕೊಂಡು ಪಾದಯಾತ್ರೆಯನ್ನು ಯಶಸ್ವಿಗೊಳಿಸಿದರು.
ಇದೇ ಸಂದರ್ಭದಲ್ಲಿ ಪೂಜ್ಯ ಶ್ರೀಗಳು ಆಶೀರ್ವಚನ ನೀಡಿ ತೋಳ್ಬಲವನ್ನು ಶಕ್ತಿಗಾಗಿ ಪ್ರದರ್ಶನ ಮಾಡದೆ, ಭಕ್ತಿಗಾಗಿ ಪ್ರದರ್ಶನ ಮಾಡಿ ಜನರ ಮನಸ್ಸು ಗೆಲ್ಲಬೇಕು. ದುಶ್ಚಟಗಳನ್ನು ತೈಜಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ ಸುಂದರ ಸಮಾಜ ಕಟ್ಟಬೇಕು. ತಂದೆ-ತಾಯಿ, ಗುರು-ಹಿರಿಯರನ್ನು ಗೌರವದಿಂದ ಕಾಣಬೇಕೆಂದು ನುಡಿದರು.
ಪಾದಯಾತ್ರೆಯ ಸಂಘಟನೆಯ ಉಸ್ತುವಾರಿ ಶಿವಲಿಂಗ ಶಾಸ್ತ್ರಿಗಳು ಸಿದ್ದಾಪೂರ ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 