ಪುಲ್ವಾಮದಲ್ಲಿ ಉಗ್ರರಿಗಾಗಿ ಶೋಧ ಕಾರ್ಯಾಚರಣೆ
ಶ್ರೀನಗರ, ಜೂ.13, ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರಿಗಾಗಿ ಶೋಧ ಕಾರ್ಯವನ್ನು ಭದ್ರತಾ ಪಡೆ ಶನಿವಾರ ಮುಂದುವರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಜಮ್ಮು ಕಾಶ್ಮೀರ ಪೊಲೀಸ್ನ ವಿಶೇಷ ಕಾರ್ಯಾಚರಣಾ ಪಡೆ, ಸಿಆರ್ಪಿಎಫ್ ಮತ್ತು ರಾಷ್ಟ್ರೀಯ ರೈಫಲ್ಸ್, ಜಂಟಿಯಾಗಿ ಪುಲ್ವಾಮ ಜಿಲ್ಲೆಯ ಗುಲಾಬ್ ಭಾಗ್ ತ್ರಾಲ್ನಲ್ಲಿ ಶೋಧ ಕಾರ್ಯ ಆರಂಭಿಸಿದೆ ಎಂದು ಅವು ತಿಳಿಸಿವೆ.ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಗ್ರಾಮದ ಎಲ್ಲಾ ಹೊರ ಹೋಗುವ ಮಾರ್ಗಗಳನ್ನು ಬಂದ್ ಮಾಡಿದ ಭದ್ರತಾ ಪಡೆ, ಮನೆ ಮನೆ ಶೋಧ ಆರಂಭಿಸಿದೆ. ಬೆಳಗ್ಗಿನ ವೇಳೆ ಸ್ವಲ್ಪ ಹೊತ್ತು ಗುಂಡು ಹಾರಾಟದ ಶಬ್ಧ ಕೇಳಿಬಂದಿದೆ.ಅದು ಉಗ್ರರ ಕಡೆಯಿಂದ ಅಥವಾ ಭದ್ರತಾಪಡೆ ನಡೆದ ಗುಂಡಿನ ದಾಳಿಯೇ ಎಂಬುದು ಇನ್ನೂ ದೃಢಪಟ್ಟಿಲ್ಲ. ಅಲ್ಲಿಂದ ಕೊನೆಯ ಬಾರಿಗೆ ವರದಿ ಬಂದಾಗಲೂ ಶೋಧ ಕಾರ್ಯ ಮುಂದುವರಿದಿತ್ತು. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ ಎಂದು ಮೂಲಗಳು ತಿಳಿಸಿವೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 