ಶಿವಾಜಿ ಮಹಾರಾಜರ ಪುತ್ಥಳಿ ಲೋಕಾರೆ್ಣ ಕಾರ್ಯಕ್ರಮ
Putthali Lokarna program of Shivaji Maharaj
ಶಿವಾಜಿ ಮಹಾರಾಜರ ಪುತ್ಥಳಿ ಲೋಕಾರೆ್ಣ ಕಾರ್ಯಕ್ರಮ
ಅಥಣಿ 04: ಅಥಣಿ ಪಟ್ಟಣದಲ್ಲಿ ಇತ್ತೀಚಿಗೆ ನಿರ್ಮಾಣಗೊಂಡ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಲೋಕಾರೆ್ಣ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇವರನ್ನು ಸ್ಥಳೀಯ ಮರಾಠಾ ಸಮಾಜ ಬಾಂಧವರ ನಿಯೋಗ ಮಾಜಿ ಸಚಿವ ಶ್ರೀಮಂತ ಪಾಟೀಲ ನೇತೃತ್ವದಲ್ಲಿ ನವ ದೇಹಲಿಗೆ ತೆರಳಿ ಭೇಟಿ ಮಾಡಿ ಮನವಿ ಮಾಡಿತು.
ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಇವರನ್ನು ನವ ದೇಹಲಿಯ ಕಛೇರಿಯಲ್ಲಿ ಭೇಟಿ ಮಾಡಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಕುರಿತು ಮಾಹಿತಿ ನೀಡಿದರು ಜೊತೆಗೆ ಪುತ್ಥಳಿಯನ್ನು ತಾವೇ ಉದ್ಘಾಟಿಸಬೇಕು ಎಂದು ಮರಾಠಾ ಸಮಾಜ ಬಾಂಧವರ ನಿಯೋಗ ಮನವಿ ಮಾಡಿತು. ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದು, ಎಪ್ರಿಲ್ ತಿಂಗಳಲ್ಲಿಯೇ ಪುತ್ಥಳಿ ಅನಾವರಣಗೊಳಿಸಲು ನಿರ್ಧರಿಸಲಾಗಿದೆ ದಿನಾಂಕ ಮತ್ತೊಮ್ಮೆ ಅವರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ, ಮಾಜಿ ಶಾಸಕ ಕುಮಾರ ಬಂಗಾರ್ಪ, ಬಿಜೆಪಿ ಮುಖಂಡ ಎನ್.ಆರ್.ಸಂತೋಷ, ಮರಾಠಾ ಸಮಾಜ ಬಾಂಧವರ ನಿಯೋಗದಲ್ಲಿ ಕೆ.ಎಮ್.ಎಫ್ ಮಾಜಿ ನಿರ್ದೇಶಕ ಅಪ್ಪಾಸಾಹೇಬ ಅವತಾಡೆ, ಮರಾಠಾ ಮಹಾ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಮುಖಂಡ ಭಾವುಸಾಹೇಬ ಜಾಧವ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 