ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಅವಶ್ಯ : ಎಲ್ ವೀರಭದ್ರ ರಾವ್
Quality education is essential for students: L Veerabhadra Rao
ಕಾರಟಗಿ 14: ಶಿಕ್ಷಣ ಸಂಸ್ಥೆ ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ "ಎಕ್ಸ್ ಪೋ" ಕಾರ್ಯಕ್ರಮ ಜರಗಿತು.ಈ ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿ ಎಲ್ ವೀರಭದ್ರ ರಾವ್ ಚಾಲನೆ ನೀಡಿ ಮಾತನಾಡಿ ಮಕ್ಕಳಿಗೆ ವೈಜ್ಞಾನಿಕ ವಿಷಯಗಳ ಜತೆ ಕಲಾ, ಸಾಹಿತ್ಯದ ಆಸಕ್ತಿ ಮೂಡಿಸಬೇಕು,"ಚಿಕ್ಕ ಮಕ್ಕಳು ಒಂದು ನಿಧಿ, ಅವರ ಮೌಲ್ಯವನ್ನು ಅಳೆಯಲು ಸಾಧ್ಯವಿಲ್ಲ." ವಿದ್ಯಾರ್ಥಿ ಜೀವನದಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಮನೋಭಾವ ಅತೀ ಅವಶ್ಯ.ಇದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿ ಆಗುತ್ತದೆ,ಕೌಶಲಾಧರಿತ ಗುಣಮಟ್ಟದ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನವನ್ನು ಪಡೆದುಕೊಳ್ಳುವಂತೆ ಪ್ರೆ?ರೇಪಿಸಬೇಕು, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜತೆಗೆ ಹೊಸ ಹೊಸ ವಿಷಯದಲ್ಲಿಚಿಂತನೆ ಮಾಡಲು ಹುರಿದುಂಬಿಸುವ ಮೂಲಕ ಹೊಸ ಜಗತ್ತಿನ ಅನಾವರಣ ಮಾಡಬೇಕು ಎಂದರು.ಪುಟಾಣಿಗಳ ಕಲರವ ತುಂಬಿತ್ತು. ಪಾಲಕರೂ ಅತ್ಯಧಿಕ ಸಂಖ್ಯೆಯಲ್ಲಿದ್ದರು. ಎಕ್ಸ್ಪೋ ವಿಜ್ಞಾನ ಜಾತ್ರೆಯಂತೆ ಕಂಗೊಳಿಸುತ್ತಿತ್ತು.ನರ್ಸರಿ, ಎಲ್ ಕೆ ಜಿ, ಯು ಕೆ ಜಿ, ಮಕ್ಕಳು ಇಂಗ್ಲಿಷ್ ವಿಜ್ಞಾನ ಮಾದರಿಗಳು, ಗಣಿತ ಮಾದರಿಗಳು, ಕನ್ನಡ ಜ್ಞಾನಕೋಶ ವಿಭಾಗಗಳಲ್ಲಿ ತಾವು ಸಿದ್ಧಪಡಿಸಿದ ಮಾದರಿಗಳ ಬಗ್ಗೆ ಮಕ್ಕಳು ಪಟಪಟಾ ಅಂತ ಹೇಳುತ್ತಿದ್ದುದು ಪಾಲಕರಲ್ಲಿ ಖುಷಿ ಮೂಡಿಸಿತ್ತು.ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಶ್ರೀಮನ್ ನಾರಾಯಣ, ಡಾ ಮೊಹಮ್ಮದ್ ರಫೀಕ್ ಪ್ರಾಚಾರ್ಯರು, ಶ್ರೀದೇವಿ ಕೊಲ್ಲಾ ಶಾಲೆಯ ಮುಖ್ಯಸ್ಥರು, ಸಾಜಿದ ಬೇಗಂ, ಗಂಗಮ್ಮ ಹಿರೇಮಠ, ಶಿಕ್ಷಕಿಯರು ಲಕ್ಷ್ಮಿ ಅಪರ್ಣ, ಶ್ವೇತಾ, ಪ್ರತಿಭಾ, ಹೇಮಾ, ಶಿಕ್ಷಕ ವೃಂದ ಪಾಲಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 