ಆರ್.ಸುರೇಶಗೆ ಪಿಎಚ್.ಡಿ
R. Suresh has a Ph.D
ಬಾಗಲಕೋಟೆ 04: ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಸುರೇಶ ಆರ್ ಅವರಿಗೆ ಪಿಎಚ್.ಡಿ ಲಭಿಸಿದೆ. ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಮಂಡಿಸಿದ ಎ ಸ್ಟಡಿ ಆಫ್ ಇಂಡಿಯನ್ ಫೆಮಿನಿಸ್ಟ ಡ್ರಾಮಾಸ್ ಎಂಬ ಪ್ರಬಂಧಕ್ಕೆ ಪಿಎಚ್.ಡಿ ಪದವಿ ದೊರೆತಿದೆ. ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಕವಿತಾ ಕುಸುಗಲ್ಲ ಅವರ ಮಾರ್ಗದರ್ಶನದಲ್ಲಿ ಪಿಎಚ್.ಡಿ ಪೂರೈಸಿದ್ದಾರೆ. ಸುರೇಶ ಆರ್ಗೆ ಬಿವ್ಹಿವ್ಹಿ ಸಂಘದ ಕಾರ್ಯಾಧ್ಯಕ್ಷರಾದ ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿಗಳಾದ ಮಹೇಶ ಎನ್.ಅಥಣಿ, ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ, ಗುರುಬಸವ ಸೂಳಿಭಾವಿ, ಆಡಳಿತಾಧಿಕಾರಿಗಳಾದ ವ್ಹಿ ಆರ್.ಶಿರೋಳ, ಡಾ.ವಿ.ಎಸ್.ಕಟಗಿಹಳ್ಳಿಮಠ, ಪ್ರಾಚಾರ್ಯರಾದ ಎಸ್.ಆರ್.ಮೂಗನೂರಮಠ ಸೇರಿದಂತೆ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 