ರಬಕವಿ-ಮಹಿಷವಾಡಗಿ ಸೇತುವೆ ಕಾಮಗಾರಿ ಆರಂಭ
Rabakavi-Mahishwadagi bridge construction begins
ರಬಕವಿ-ಬನಹಟ್ಟಿ 16: ಇಲ್ಲಿನ ಜನತೆಯ ದಶಕಗಳ ಬೇಡಿಕೆಯಾಗಿದ್ದ ಕುಂಟುತ್ತ, ತೆವಳುತ್ತ ಸಾಗಿದ್ದ ರಬಕವಿ-ಮಹಿಷವಾಡಗಿ ಸೇತುವೆ ಕಾಮಗಾರಿ ಬುಧವಾರದಿಂದ ಪ್ರಾರಂಭವಾಗಿದ್ದು, ನಾಗರಿಕರಲ್ಲಿ ಹರ್ಷ ಮುಡಿಸಿದೆ. ಸೇತುವೆ ಮಧ್ಯದಲ್ಲಿನ ಪಿಲ್ಲರ್ ಅಳವಡಿಸಲು ತೊಡಕಾಗಿದ್ದ ಮಹಿಷವಾಡಗಿ ಭಾಗದಲ್ಲಿನ ರೈತರ ಜಮೀನಗಳಿಗೆ ಅಳವಡಿಸಿದ್ದ ಪೈಪ್ಲೈನ್ಗಳನ್ನು ಸ್ಥಳಾಂತರಿಸುವ ಕಾರ್ಯ ಆರಂಭಗೊಂಡಿದ್ದು, ನಿವೃತ್ತ ಅಭಿಯಂತರ, ಮಹಿಷವಾಡಗಿ ಧುರೀಣ ಅರುಣ ಯಲಗುದ್ರಿ ನೇತೃತ್ವದಲ್ಲಿ ಎಲ್ಲ ರೈತರ ಜಮೀನಿಗಳ ಪೈಪ್ಲೈನ್ ಸ್ಥಳಾಂತರಗೊಳ್ಳುತ್ತಿವೆ.
ಡಿಸೆಂಬರ್ ತಿಂಗಳಲ್ಲಿ ಡಾ.ರವಿ ಜಮಖಂಡಿ ನೇತೃತ್ವದ ಉಪವಾಸ ನಿರಶನಕಾರರ ಬೇಡಿಕೆಗೆ ಸ್ಪಂದಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಶೀಘ್ರ ಕಾಮಗಾರಿ ಆರಂಭಿಸಿ, ಮುಕ್ತಾಯಗೊಳಿಸುವ ಭರವಸೆ ನೀಡಿ ನಿರಶನಕ್ಕೆ ಅಂತ್ಯ ಹಾಡಿದ್ದರು. ಬಹುದಿನಗಳ ಬಳಿಕ ದಶಕಗಳ ಬೇಡಿಕೆಗೆ ಸದ್ಯ ನದಿಯಲ್ಲಿನ ನೀರು ಖಾಲಿಯಾದ ಕಾರಣ ಕಾಮಗಾರಿ ಆರಂಭಿಸಲಾಗಿದ್ದು, ಸೇತುವೆ ಮಧ್ಯಭಾಗದ ಪಿಲ್ಲರ್ಗಳನ್ನು ಅಳವಡಿಸಲು ಗುತ್ತಿಗೆದಾರ ಮುಂದಾಗಿದ್ದಾರೆ. ಕಾಮಗಾರಿ ಆರಂಭಿಸಿದ್ದಕ್ಕೆ ಇಲ್ಲಿನ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 