ರಬಕವಿ-ಮಹಿಷವಾಡಗಿ ಸೇತುವೆ ಕಾಮಗಾರಿ ಆರಂಭ
Rabakavi-Mahishwadagi bridge construction begins
ರಬಕವಿ-ಬನಹಟ್ಟಿ 16: ಇಲ್ಲಿನ ಜನತೆಯ ದಶಕಗಳ ಬೇಡಿಕೆಯಾಗಿದ್ದ ಕುಂಟುತ್ತ, ತೆವಳುತ್ತ ಸಾಗಿದ್ದ ರಬಕವಿ-ಮಹಿಷವಾಡಗಿ ಸೇತುವೆ ಕಾಮಗಾರಿ ಬುಧವಾರದಿಂದ ಪ್ರಾರಂಭವಾಗಿದ್ದು, ನಾಗರಿಕರಲ್ಲಿ ಹರ್ಷ ಮುಡಿಸಿದೆ. ಸೇತುವೆ ಮಧ್ಯದಲ್ಲಿನ ಪಿಲ್ಲರ್ ಅಳವಡಿಸಲು ತೊಡಕಾಗಿದ್ದ ಮಹಿಷವಾಡಗಿ ಭಾಗದಲ್ಲಿನ ರೈತರ ಜಮೀನಗಳಿಗೆ ಅಳವಡಿಸಿದ್ದ ಪೈಪ್ಲೈನ್ಗಳನ್ನು ಸ್ಥಳಾಂತರಿಸುವ ಕಾರ್ಯ ಆರಂಭಗೊಂಡಿದ್ದು, ನಿವೃತ್ತ ಅಭಿಯಂತರ, ಮಹಿಷವಾಡಗಿ ಧುರೀಣ ಅರುಣ ಯಲಗುದ್ರಿ ನೇತೃತ್ವದಲ್ಲಿ ಎಲ್ಲ ರೈತರ ಜಮೀನಿಗಳ ಪೈಪ್ಲೈನ್ ಸ್ಥಳಾಂತರಗೊಳ್ಳುತ್ತಿವೆ.
ಡಿಸೆಂಬರ್ ತಿಂಗಳಲ್ಲಿ ಡಾ.ರವಿ ಜಮಖಂಡಿ ನೇತೃತ್ವದ ಉಪವಾಸ ನಿರಶನಕಾರರ ಬೇಡಿಕೆಗೆ ಸ್ಪಂದಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಶೀಘ್ರ ಕಾಮಗಾರಿ ಆರಂಭಿಸಿ, ಮುಕ್ತಾಯಗೊಳಿಸುವ ಭರವಸೆ ನೀಡಿ ನಿರಶನಕ್ಕೆ ಅಂತ್ಯ ಹಾಡಿದ್ದರು. ಬಹುದಿನಗಳ ಬಳಿಕ ದಶಕಗಳ ಬೇಡಿಕೆಗೆ ಸದ್ಯ ನದಿಯಲ್ಲಿನ ನೀರು ಖಾಲಿಯಾದ ಕಾರಣ ಕಾಮಗಾರಿ ಆರಂಭಿಸಲಾಗಿದ್ದು, ಸೇತುವೆ ಮಧ್ಯಭಾಗದ ಪಿಲ್ಲರ್ಗಳನ್ನು ಅಳವಡಿಸಲು ಗುತ್ತಿಗೆದಾರ ಮುಂದಾಗಿದ್ದಾರೆ. ಕಾಮಗಾರಿ ಆರಂಭಿಸಿದ್ದಕ್ಕೆ ಇಲ್ಲಿನ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 