ಅಮೇಥಿ ಕ್ಷೇತ್ರದ ಜನರಿಗೆ ರಾಹುಲ್ ಗಾಂಧಿ ದ್ರೋಹ ಎಸಗಿದ್ದಾರೆ: ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ
ಲಕ್ನೋ, ಏ.4-ಕೇರಳದ ವೈನಾಡು ಲೋಕಸಭಾ ಕ್ಷೇತ್ರದಿಂದ ಸ್ಪಧರ್ಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಇಂದು ನಾಮಪತ್ರ ಸಲ್ಲಿಸುವ ಮೂಲಕ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದ ಜನರಿಗೆ ಅಪಮಾನ ಮಾಡಿ ದ್ರೋಹ ಎಸಗಿದ್ದಾರೆ ಎಂದು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
ಲಕ್ನೋದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದ ರಾಹುಲ್ಗಾಂಧಿಯವರ ಮೇಲೆ ನಂಬಿಕೆ ಇಟ್ಟು ಅಮೇಥಿ ಕ್ಷೇತ್ರದ ಜನರು ಚುನಾಯಿಸಿ ಲೋಕಸಭೆಗೆ ಕಳುಹಿಸುತ್ತಿದ್ದರು. ಆದರೆ ಈ ಬಾರಿ ಅಮೇಥಿ ಜೊತೆ ವೈನಾಡಿನಲ್ಲಿ ಸ್ಪಧರ್ಿಸುವ ಮೂಲಕ ರಾಹುಲ್ ತಮ್ಮ ಕ್ಷೇತ್ರದ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ಟೀಕಿಸಿದರು.
ಅಮೇಥಿಯಲ್ಲಿ ಗೆಲ್ಲುವುದು ಕಷ್ಟ ಎಂಬುದು ಮನವರಿಕೆಯಾಗಿರುವುದರಿಂದಲೇ ರಾಹುಲ್ ವೈನಾಡು ಲೋಕಸಭಾ ಕೇತ್ರವನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅವರ ಗೆಲುವು ಕಷ್ಟ ಎಂಬುದು ಕಾಂಗ್ರೆಸ್ ನಾಯಕರಿಗೂ ಗೊತ್ತು ಎಂದು ಸ್ಮೃತಿ ವಾಗ್ದಾಳಿ ನಡೆಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 