ರಾಜಸ್ತಾನ ದ್ಲಲಿ ಸಜೀವ ಮೋಟಾರ್ ಬಾಂಬ್ ಪತ್ತೆ
ಬಿಕಾನೇರ್, ಏ.3- ರಾಜಸ್ಥಾನದ ಬಿಕಾನೇರ್ ಪಟ್ಟಣದ ಬಳಿ ಭಾರತೀಯ ವಾಯು ಪಡೆಯ ವಾಯು ನೆಲೆ ಸಮೀಪ ಇಂದು ಬೆಳಗ್ಗೆ ಸಜೀವ ಮೋಟರ ಬಾಂಬ್ ಪತ್ತೆಯಾಗಿದೆ ಇದರಿಂದ ಆಪ್ರದೇಶದಲ್ಲಿ ಆತಂಕ ವಾತಾವರಣ ಸೃಷ್ಟಿಯಾಗಿತ್ತು.
ಪ್ರಕರಣದ ತುರ್ತು ತನಿಖೆಗಾಗಿ ಭಾರತೀಯ ವಾಯು ಪಡೆಯ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಭಾರತ ಮತ್ತು ಪಾಕ್ ಗಡಿಯಲ್ಲಿ ಗುಂಡಿನ ಹಾಗೂ ಶೆಲ್ ದಾಳಿಯ ಚಕಮಕಿ ನಡೆಯುತ್ತಿರುವ ನಡುವೆಯೇ ಈ ವಿದ್ಯಮಾನವು ಇನ್ನಷ್ಟು ಉದ್ವಿಗ್ನತೆ ಮತ್ತು ಆತಂಕಕ್ಕೆ ಕಾರಣವಾಗಿದೆ.
ಈ ಘಟನೆಯ ಹಿನ್ನೆಲೆಯಲ್ಲಿ ರಾಜಸ್ತಾನ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಸೂಕ್ಷ್ಮ ಸ್ಥಳಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ಪಂಜಾಬ್ ಗಡಿ ಸಮೀಪಕ್ಕೆ ಪಾಕಿಸ್ತಾನದ ನಾಲ್ಕು ಎಫ್16 ಯುದ್ಧ ವಿಮಾನಗಳು ಹಾರಿ ಬಂದಾಗ ಭಾರತೀಯ ವಾಯು ಪಡೆಯ ಸುಖೋಯಿ 30 ಮತ್ತು ಮಿರಾಜ್ 2000 ಯುದ್ಧ ವಿಮಾನಗಳು ಅವುಗಳನ್ನು ಬೆನ್ನಟ್ಟಿ ಹಿಮ್ಮೆಟ್ಟಿಸಿದ್ದವು.
ಪಾಕ್ ಯುದ್ಧ ವಿಮಾನಗಳ ಜತೆಗೆ ಕಣ್ಗಾವಲಿನ ಡ್ರೋಣ್ಗಳೂ ಕೂಡ ಹಾರಿ ಬಂದಿದ್ದವು ಗಡಿಯ ಯಾವ ಭಾಗಗಳಲ್ಲಿ ಭಾರತೀಯ ಸೇನಾ ಪಡೆ ನಿಯೋಜಿಸಲ್ಪಟ್ಟಿದೆ ಎಂಬುದನ್ನು ಪತ್ತೆ ಹಚ್ಚಲು ಪಾಕಿಸ್ತಾನ ಡ್ರೋಣ್ಗಳನ್ನು ಹಾರಿಸಲ್ಪಟ್ಟಿರಬೇಕೆಂದು ಎಂದು ಶಂಕಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 