ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗುವಂತಾಗಿದ್ದು ವಿಧಿಯ ಆಟ: ಡಾ. ಸುಧಾಕರ್ ಟ್ವೀಟ್
ಬೆಂಗಳೂರು, ಜೂ.10,ಇದೇ ತಿಂಗಳ 19ರಂದು ನಡೆಯಲಿರುವ ರಾಜ್ಯ ಸಭೆಯ ದ್ವೈ-ವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಮಲ್ಲಿಕಾರ್ಜುನ್ ಖರ್ಗೆ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ದೇವೇಗೌಡ ಅವರು ಈಗಾಗಲೇ ನಾಮ ಪತ್ರ ಸಲ್ಲಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಹಿರಿಯರು ಇಬ್ಬರು ಅಖಾಡಕ್ಕಿಳಿಯುತ್ತಿರುವುದರಿಂದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೆ ಅವರು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ. ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗುವಂತಾಗಿದ್ದು ವಿಧಿಯ ಆಟ. ಆದರೆ, ಈ ಮುತ್ಸದ್ಧಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. ದೇವರು ಇಬ್ಬರಿಗೂ ಆರೋಗ್ಯವನ್ನು ಕರುಣಿಸಲಿ. ಬಿಜೆಪಿಯ ಉದಾರತೆಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡುವ ಮೂಲಕ ಇಬ್ಬರ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 