ದೆಹಲಿಯ ಹೋಟೆಲ್ವೊಂದರಲ್ಲಿ ರಮೇಶ್ ಜಾರಕಿಹೊಳಿ ಪ್ರತ್ಯಕ್ಷ!
ಬೆಂಗಳೂರು,ಡಿ.29-ಸಚಿವ ಸ್ಥಾನದಿಂದ ಕೋಕ್ ನೀಡಿದ ಮೇಲೆ ಮುನಿಸಿಕೊಂಡು ಕಳೆದ ಐದು ದಿನಗಳಿಂದ ಯಾರ ಕೈಗೂ ಸಿಗದೆ ಅಜ್ಞಾತ ಸ್ಥಳದಲ್ಲಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಅವರ ಕುಟುಂಬ ನವದೆಹಲಿಯ ಪ್ರತಿಷ್ಠಿತ ಹೋಟೆಲ್ವೊಂದರಲ್ಲಿ ಪ್ರತ್ಯಕ್ಷರಾಗಿದ್ದಾರೆ.
ನವದೆಹಲಿಯ ಪಂಚತಾರಾ ಹೋಟೆಲ್ವೊಂದರಲ್ಲಿ ಕುಟುಂಬ ಸಮೇತ ರಮೇಶ್ ಜಾರಕಿಹೊಳಿ ವಾಸ್ತವ್ಯ ಹೂಡಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ರಮೇಶ್ ಜಾರಕಿಹೊಳಿ ಪುತ್ರ ಅಮರ್ನಾಥ್, ಅಳಿಯ ಅಂಬಿರಾವ್ ಪಾಟೀಲ್ ಸೇರಿದಂತೆ ಮತ್ತಿತರರು ದೆಹಲಿಯ ಹೋಟೆಲ್ನಲ್ಲಿ ಎರಡು ದಿನಗಳ ಹಿಂದೆಯೇ ವಾಸ್ತವ್ಯ ಹೂಡಿರುವುದು ಬೆಳಕಿಗೆ ಬಂದಿದೆ.
ಕಳೆದ ಐದು ದಿನಗಳ ಹಿಂದೆ ಬೆಂಗಳೂರಿನಿಂದ ಹೊರಟ್ಟಿದ್ದ ರಮೇಶ್ ತಮ್ಮ ತವರು ಜಿಲ್ಲೆ ಬೆಳಗಾವಿಯ ಗೋಕಾಕ್ನಲ್ಲಿ ಕಾಣಿಸಿಕೊಂಡ ನಂತರ ಅವರು ಎಲ್ಲಿಗೆ ಹೋಗಿದ್ದಾರೆ, ಯಾರನ್ನು ಭೇಟಿಯಾಗಿದ್ದರು, ಅವರ ಮುಂದಿನ ರಾಜಕೀಯ ನಡೆಗಳು ಏನು ಎಂಬುದರ ಬಗ್ಗೆ ಕುತೂಹಲ ಮೂಡಿಸಿತ್ತು.
ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಲು ಸಹೋದರ ಹಾಗೂ ಸಚಿವ ಸತೀಶ್ ಜಾರಕಿಹೊಳಿ , ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕರು ನಿರಂತರವಾಗಿ ಪ್ರಯತ್ನ ನಡೆಸಿದ್ದರೂ ಯಾರ ಕೈಗೂ ಸಿಕ್ಕಿರಲಿಲ್ಲ.
ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಗೌಪ್ಯ ಸ್ಥಳಕ್ಕೆ ತೆರಳಿದ್ದ ರಮೇಶ್ ಜಾರಕಿಹೊಳಿ ಎರಡು ದಿನಗಳ ಹಿಂದೆಯೇ ದೆಹಲಿಗೆ ತೆರಳಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿತ್ತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 