9 ಲಕ್ಷ ಶಾಲೆಗಳಲ್ಲಿ ಶಾಲಾ ಕೈತೋಟ: ರಮೇಶ್ ಪೊಖ್ರಿಯಾಲ್
RAMESH
ನವದೆಹಲಿ, ನವೆಂಬರ್ 28 -ದೇಶದ ಎರಡು ಲಕ್ಷಕ್ಕೂ ಹೆಚ್ಚು ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟಕ್ಕಾಗಿ ಶಾಲಾ ಕೈತೋಟಗಳನ್ನು ಬೆಳೆಸಲಾಗಿದೆ ಎಂಬ ಮಾಹಿತಿಯನ್ನು ಗುರುವಾರ ರಾಜ್ಯಸಭೆಗೆ ನೀಡಲಾಯಿತು.
ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ನೀಡಿದ ಉತ್ತರದಲ್ಲಿ ಈ ವಿಷಯ ತಿಳಿಸಿದರು.
ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಲೆಗಳಲ್ಲಿ ಶಾಲಾ ಕೈತೋಟಗಳನ್ನು ಬೆಳೆಸಲು ಕೇಂದ್ರ ಅಗತ್ಯ ಪ್ರೋತ್ಸಾಹ ನೀಡುತ್ತಿದೆ ಎಂದು ಅವರು ಹೇಳಿದರು.
ಶಾಲಾ ಕೈತೋಟಗಳಲ್ಲಿ ಬೆಳೆಯುವ ವಿವಿಧ ತರಕಾರಿ ಮತ್ತು ಹಣ್ಣುಗಳನ್ನು ಮಧ್ಯಾಹ್ನದ ಬಿಸಿ ಊಟಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಈ ಯೋಜನೆಯಡಿ ಇನ್ನೂ 9 ಲಕ್ಷ ಶಾಲೆಗಳಲ್ಲಿ ಶಾಲಾ ಕೈತೋಟಗಳನ್ನು ಬೆಳೆಸಲಾಗುವುದು.
ಸಿಬಿಎಸ್ ಸಿಯ ಹತ್ತು ಮತ್ತು ಹನ್ನೆರಡನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಹೆಚ್ಚಳವನ್ನು ವಾಪಸ್ ಪಡೆಯುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಸ್ವಾಯತ್ತ ಸಂಸ್ಥೆ ಸೇರಿದಂತೆ ದೇಶದ ಎಲ್ಲ ವಿದ್ಯಾರ್ಥಿಗಳಿಗೂ ಅನ್ವಯವಾಗಲಿರುವುದರಿಂದ ಶುಲ್ಕ ಕಡಿಮೆ ಮಾಡುವುದು ಅಸಾಧ್ಯ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 