ಗುರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾಮೋತ್ಸವ: ಪುಣ್ಯ ಜಟೋತ್ಸವ
Ramotsava at Guru Mahalingeshwar Temple: Punya Jatotsava
ಗುರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾಮೋತ್ಸವ: ಪುಣ್ಯ ಜಟೋತ್ಸವ
ಮಹಾಲಿಂಗಪುರ 23: ಕಳೆದ ವರ್ಷ ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಗೊಂಡ ವರ್ಷಾಚರಣೆ ಸವಿ ನೆನಪಿನಲ್ಲಿ ಬುಧವಾರ ಪಟ್ಟಣದ ಗುರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಥಳೀಯ ಮಂತ್ರಾಲಯ ಪಾದ ಯಾತ್ರಾ ಕಮಿಟಿ ವತಿಯಿಂದ ರಾಮೋತ್ಸವ ಪ್ರಯುಕ್ತ ಮಹಾಲಿಂಗೇಶ್ವರರ ಪುಣ್ಯ ಜಟೋತ್ಸವ ಕಾರ್ಯವು ಪೀಠಾಧಿಪತಿ ರಾಜೇಂದ್ರ ಮಹಾಸ್ವಾಮಿಗಳಿಂದ ನೆರೆವೇರಿತು.
ಈ ಕಾರ್ಯಕ್ರಮಕ್ಕೆ ಗೋಕಾಕ ತಾಲೂಕಿನ ಕುಲಗೋಡ ಗ್ರಾಮದಿಂದ ನೂರಾರು ಹಣುಮ ಮಾಲಾಧಾರಿಗಳು ಬಾಲರಾಮನ ಮೂರ್ತಿಯನ್ನು ಹೊತ್ತು ತಂದರು. ಬಸವೇಶ್ವರ ವೃತ್ತಕ್ಕೆ ಆಗಮಿಸಿದ ರಾಮನ ಮೂರ್ತಿಗೆ ಸ್ಥಳೀಯ ಭಕ್ತರು ಅದ್ಧೂರಿ ಸ್ವಾಗತ ನೀಡಿ ಅಲ್ಲಿಂದ ಜೋಡು ರಸ್ತೆ ಮೂಲಕ ನಡುಚೌಕಿ ಮಾರ್ಗದೊಂದಿಗೆ ಮಾಲಾಧಾರಿಗಳು ರಾಮ ಘೋಷ ಮೊಳಗಿಸುತ್ತ ಗುರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕರೆ ತಂದರು.
ಬುಧವಾರ ಮಠದಲ್ಲಿ ಪಾದಯಾತ್ರೆ ಕಮಿಟಿ ವತಿಯಿಂದ ಸದ್ಭಕ್ತರಿಗೆ ಮುಂಜಾನೆ ಉಪಹಾರ ಮಧ್ಯಾಹ್ನ ಸಜ್ಜಕ, ಅನ್ನ ಸಾರು ಪೂರೈಸಲಾಯಿತು. ಈ ಸಮಯದಲ್ಲಿ ಕಮಿಟಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಊರಿನ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 