ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚನ್ನಮ್ಮ ನಾಮಕರಣಕ್ಕೆ ಒತ್ತಾಯ
ಲೋಕದರ್ಶನ ವರದಿ
ಹೂವಿನಹಡಗಲಿ : ಬ್ರಿಟಿಷರ ವಿರುದ್ಧ ಸಮರ ಸಾರಿ ಹೋರಾಟ ಮಾಡಿದ ದೇಶದ ಮೊದಲ ವೀರಮಹಿಳೆ ರಾಣಿ ಕಿತ್ತೂರು ಚನ್ನಮ್ಮರನ್ನು ಸಕರ್ಾರ ರಾಷ್ಟ್ರ ಮಾತೆ ವೀರರಾಣಿ ಕಿತ್ತೂರು ಚನ್ನಮ್ಮ ಎಂದು ನಾಮಕರಣ ಮಾಡುವಂತೆ ಪಂಚಮಸಾಲಿ ಸಮಾಜದ ಕೂಡಲ ಸಂಗಮ ಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿ ಸಕರ್ಾರಗಳನ್ನು ಒತ್ತಾಯಿಸಿದ್ದಾರೆ.
ತಾಲೂಕಿನ ವಿನೋಬನಗರದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮರ 195ನೇ ವಿಜಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಈಚೆಗೆ ಮಾತನಾಡಿದ ಅವರು ಶರಣರು,ದಾರ್ಶನಿಕರನ್ನು ಒಂದು ಜಾತಿಗೆ ಸೀಮಿತಮಾಡುವುದು ಸರಿಯಲ್ಲ. ಗ್ರಾಮಸ್ಥರು ವಿಜಯೋತ್ಸವ ಆಚರಿಸಿರುವದು ಶ್ಲಾಘನೀಯ ಎಂದರು.ಪೀಠದಿಂದ ನಿರಂತವಾಗಿ ಸಮಾಜದ ಒಳಿತಿಗಾಗಿ ಉದ್ಯೋಗ,ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಹೋರಾಟ ನಡೆಸುವುದು ಅಗತ್ಯವಿದೆ ಎಂದರು.ಇದಕ್ಕೂ ಮುನ್ನ ಕಿತ್ತೂರು ಚನ್ನಮ್ಮ ಭಾವಚಿತ್ರದ ಮೆರವಣಿಗೆ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಚಾಲನೆ ನೀಡಿದರು. ಪಂಚಮಸಾಲಿ ನೌಕರರ ಸಂಘದ ರಾಜ್ಯ ಕಾರ್ಯದಶರ್ಿ ರವಿಉತ್ತಂಗಿ, ಶಿಕ್ಷಕ ಯು.ಹಾಲೇಶ, ಬಸವನಗೌಡ ಪಾಟೀಲ ಮಾತನಾಡಿದರು. ತಾ.ಪಂ.ಮಾಜಿ ಅಧ್ಯಕ್ಷ ಸೋಗಿಹಾಲೇಶ, ರಾಣಿ ಚನ್ನಮ್ಮ ಬ್ಯಾಂಕ್ ಉಪಾಧ್ಯಕ್ಷ ಕೆ.ಪತ್ರೇಶ, ಗ್ರಾಮದ ಮುಖಂಡರಾದ ಕೊಟ್ರೇಶಪ್ಪ, ಶಿವಕುಮಾರಗೌಡ, ಟಿ.ಹನುಮಂತಪ್ಪ, ಹಣ್ಣಿ ಬಸವನಗೌಡ, ಮಹ್ಮದ್ರಫಿ ಇತರರಿದ್ದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 