ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ರೆಹಮಾನಬೀ ಗೆ ದ್ವಿತೀಯ ಸ್ಥಾನ
Rehman Bee wins second place in state-level karate competition
ಗಂಗಾವತಿ 26 : ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸಂಯುಕ್ತ ಆಶ್ರಯದಲ್ಲಿ 2025ಹಿ26್ಫೂ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟ ಉತ್ಸಾಹಭರಿತವಾಗಿ ನಡೆಯಿತು.ರಾಜ್ಯದ ವಿವಿಧ ಜಿಲ್ಲೆಗಳ ಶ್ರೇಷ್ಠ ಕರಾಟೆ ಕ್ರೀಡಾಪಟುಗಳ ನಡುವೆ ನಡೆದ ಈ ಪೈಪೋಟಿಯಲ್ಲಿ, ಕೊಪ್ಪಳ ಜಿಲ್ಲೆಯನ್ನು ಪ್ರತಿನಿಧಿಸಿದ ಗಂಗಾವತಿ ತಾಲೂಕಿನ ಪ್ರತಿಷ್ಠಿತ ಬೇತೆಲ್ ಪಿಯು ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ಕು. ರೆಹಮಾನ ಬೀ ಅವರು ತಮ್ಮ ಸಾಹಸಮಯ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದರು. ಈ ಕ್ರೀಡಾಕೂಟದಲ್ಲಿ ಕು. ರೆಹಮಾನ ಬೀ ಅವರು ಹಿ32 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿ ಮಹಿಳೆಯರ ವಿಭಾಗದಲ್ಲಿ ಮೊದಲ ಬಾರಿಗೆ, ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕವನ್ನು ಪಡೆದು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಅಪಾರ ಕೀರ್ತಿ ತಂದಿದ್ದಾರೆ.
ಈ ಸಾಧನೆಯ ಮೂಲಕ ಜಿಲ್ಲೆಯಲ್ಲಿ ಮಹಿಳಾ ಕ್ರೀಡಾಪಟುಗಳ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ.ಕಠಿಣ ಸನ್ನಿವೇಶಗಳಲ್ಲಿಯೂ ಅಸಾಧ್ಯಕ್ಕೆ ಸವಾಲೊಡ್ಡುವ ಹೋರಾಟ ನಡೆಸಿದ ಅವರು, ತಮ್ಮ ಅಪಾರ ಮನೋಬಲ ಹಾಗೂ ತಾಂತ್ರಿಕ ಕೌಶಲ್ಯದ ಮೂಲಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.ಬೇತೆಲ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬ್ಯಾಬೇಜ್ ಮಿಲ್ಟನ್ ಅವರು ಮಾತನಾಡುತ್ತ,“ನಮ್ಮ ಮಕ್ಕಳ ಸಾಧನೆ ನಮ್ಮ ಕಾಲೇಜಿನ ಶಿಕ್ಷಣ ಹಾಗೂ ಕ್ರೀಡಾ ಸಂಸ್ಕೃತಿಯ ಬಲವನ್ನು ತೋರಿಸುತ್ತದೆ. ಅವರು ಕೇವಲ ಕ್ರೀಡಾಂಗಣದಲ್ಲಿ ಮಾತ್ರವಲ್ಲ, ತಮ್ಮ ಪರಿಶ್ರಮದ ಮೂಲಕ ಅನೇಕ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಇವರಿಂದ ಇನ್ನೂ ದೊಡ್ಡ ಸಾಧನೆಗಳು ಹೊರಹೊಮ್ಮಲಿವೆ ಎಂಬ ವಿಶ್ವಾಸ ನನಗಿದೆ,” ಎಂದು ಹೇಳಿದರು.ಈ ಸಾಧನೆ ಕುರಿತು ಮಾತನಾಡಿದ ಮುಖ್ಯ ತರಬೇತುದಾರ ಬಾಬುಸಾಬ್ ಅವರು, “ರೆಹಮಾನ ಬೀ ಅವರ ಶಿಸ್ತುಬದ್ಧ ಅಭ್ಯಾಸ, ಹೋರಾಟದ ಜೀವರಸ ಹಾಗೂ ಯಾವ ಪರಿಸ್ಥಿತಿಯಲ್ಲಿಯೂ ಹಿಂಜರಿಯದ ಮನೋಬಲ ಅತ್ಯಂತ ಶ್ಲಾಘನೀಯ. ಕಡಿಮೆ ಸೌಲಭ್ಯಗಳಲ್ಲಿ ಬೆಳೆದ ಇಂತಹ ಪ್ರತಿಭೆಗಳು ರಾಜ್ಯಕ್ಕಷ್ಟೇ ಅಲ್ಲ, ದೇಶಕ್ಕೂ ಹೆಮ್ಮೆ ತರುವ ಸಾಮರ್ಥ್ಯ ಹೊಂದಿವೆ,” ಎಂದರು.
ರಾಜ್ಯಮಟ್ಟದಲ್ಲಿ ವಿಜೇತರಾದ ಕು. ರೆಹಮಾನ ಬೀ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾ,“ಕುಟುಂಬ, ಕಾಲೇಜು ಹಾಗೂ ಬಾಬುಸಾಬ್ ಸರ್ ನೀಡಿದ ಬೆಂಬಲವನ್ನು ನಾನು ಎಂದಿಗೂ ಮರೆಯುವುದಿಲ್ಲ. ಪ್ರತಿದಿನದ ಅಭ್ಯಾಸ, ಶ್ರಮ ಮತ್ತು ನನ್ನದೆ ಕನಸೇ ನನ್ನ ಶಕ್ತಿ. ಈ ಗೆಲುವು ನನ್ನ ಜೀವನದ ಮೊದಲ ಹೆಜ್ಜೆ. ಮುಂದಿನ ಗುರಿ ಶ್ರಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕಾಗಿ ಚಿನ್ನದ ಪದಕ ಗೆಲ್ಲುವುದು,” ಎಂದರು.*ಪ್ರೇರಣೆಯ ದೀಪ :-*ಈ ಸಾಧನೆಯೊಂದಿಗೆ ಬೇತೆಲ್ ಪಿಯು ಕಾಲೇಜು ರಾಜ್ಯಮಟ್ಟದಲ್ಲಿ ಕ್ರೀಡಾ ಶಕ್ತಿಕೇಂದ್ರವಾಗಿ ಗುರುತಿಸಿಕೊಳ್ಳುತ್ತಿದೆ. ರೆಹಮಾನ ಬೀ ಅವರ ಯಶಸ್ಸು ಮುಂದಿನ ಪೀಳಿಗೆಯ ಅನೇಕ ವಿದ್ಯಾರ್ಥಿಗಳ ಹೃದಯದಲ್ಲಿ “ನಾನೂ ಗೆಲ್ಲುತ್ತೇನೆ” ಎಂಬ ಹೊಸ ಆತ್ಮವಿಶ್ವಾಸವನ್ನು ಮೂಡಿಸಿದೆ.ಈ ಸಂದರ್ಭದಲ್ಲಿ ಕರಾಟೆ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬೇತೆಲ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಹೇಮಾ ಸುಧಾಕರ್, ಅಧ್ಯಕ್ಷ ರಾಜು ಸುಧಾಕರ್, ಕಾರ್ಯದರ್ಶಿ ಬ್ಯಾಬೇಜ್ ಮಿಲ್ಟನ್, ಖಜಾಂಚಿ ಸುಜಾತಾ ರಾಜು, ಪದವಿ ಪ್ರಾಚಾರ್ಯ ಬಿಂಗಿ ವೆಂಕಟೇಶ್, ಮುಖ್ಯ ತರಬೇತುದಾರ ಬಾಬುಸಾಬ್, ಪಾಲಕರು ಹಾಗೂ ಕ್ರೀಡಾಭಿಮಾನಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 