ಧಾರ್ಮಿಕ ಮುಖಂಡ ಖಾಜಿ ಅವರಿಂದ ಚನ್ನಬಸವ ಶ್ರೀಗಳಿಗೆ ಶ್ರದ್ಧಾಂಜಲಿ
Religious leader Qazi pays tribute to Channabasava Sri
ತಾಳಿಕೋಟಿ 12: ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ವಚನ ಶಿಲಾ ಮಂಟಪದ ಪೀಠಾಧಿಪತಿ ಚನ್ನಬಸವ ಮಹಾಸ್ವಾಮಿಗಳ ನಿಧನಕ್ಕೆ ತಾಳಿಕೋಟಿ ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗುರುವಾರ ಇಂಗಳೇಶ್ವರದ ವಚನ ಶಿಲಾ ಮಂಟಪಕ್ಕೆ ಭೇಟಿ ನೀಡಿದ ಅವರು ಮಠಾಧೀಶರೊಂದಿಗೆ ಸೇರಿ ಲಿಂಗೈಕ್ಯ ಚನ್ನಬಸವ ಶ್ರೀಗಳ ಪಾರ್ಥಿವ ಶರೀರಕ್ಕೆ ಪುಷ್ಾರೆ್ಪಣ ಅರ್ಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಕಳೆದ 30 ವರ್ಷಗಳಿಂದ ನಮ್ಮೊಂದಿಗೆ ಸ್ನೇಹಪರ ಸಂಬಂಧವನ್ನು ಹೊಂದಿದ್ದ ಶ್ರೀಗಳು ಮತ್ತು ನಾನು ಸಾಕಷ್ಟು ಕಾರ್ಯಕ್ರಮಗಳಲ್ಲಿ ವೇದಿಕೆಯನ್ನು ಹಂಚಿಕೊಂಡಿದ್ದೇವೆ. ಅವರೊಬ್ಬ ಅಪ್ಪಟ ಬಸವ ಅನುಯಾಯಿ, ತಮ್ಮ ಮಠದಲ್ಲಿ ಸಾವಿರಾರು ವಚನಗಳನ್ನು ಗೋಡೆಗಳಲ್ಲಿ ಬರೆಯಿಸಿ ನಿರಂತರ ಪ್ರಚಾರವನ್ನು ಮಾಡಿದವರು. ಅತ್ಯಂತ ಸರಳ ವ್ಯಕ್ತಿತ್ವದ ನೇರ ನಿಷ್ಠುರ ನುಡಿಗಳಿಗೆ ಹೆಸರುವಾಸಿಗಳಾಗಿದ್ದರು.
ಅವರ ಅಗಲುವಿಕೆ ಧಾರ್ಮಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದರು.ಮುಸ್ಲಿಂ ಸಮಾಜದ ಗಣ್ಯರಾದ ಅಬ್ದುಲ್ ರೆಹಮಾನ ಎಕೀನ, ಮೆಹಬೂಬ ಚೋರಗಸ್ತಿ, ಮುರ್ತುಜಾಸಾಬ ಮೇತ್ರಿ(ಇಂಜನೀಯರ), ನಜೀರ ಚೋರಗಸ್ತಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 