ಹಣಬರಹಟ್ಟಿ ಗ್ರಾಮದಲ್ಲಿ ರೇಣುಕಾಚಾರ್ಯರ ಜಯಂತಿ ಆಚರಣೆ
Renukacharya's birth anniversary celebrated in Hanabarahati village
.
ನೇಸರಗಿ 02 : ಸಮೀಪದ ಹಣಬರಹಟ್ಟಿ ಗ್ರಾಮದ ಹಿರೇಮಠದ ಷ ಬ್ರ ಬಸವಲಿಂಗ ಶಿವಾಚಾರ್ಯರ ನೇತೃತ್ವದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ರೈತ ಸಂಘದ ಮುಖಂಡರಾದ ಮಹಾಂತೇಶ ಹಿರೇಮಠ ಮಾತನಾಡಿ ವೀರಶೈವ ಧರ್ಮದ ಸಂಸ್ಥಾಪಕರು ಹಾಗೂ ಮಾನವ ಧರ್ಮಕ್ಕೆ ಜಯವಾಗಲಿ ಎಂದು ಸಾರಿದ ಗುರುಗಳು ಶ್ರೀ ರೇಣುಕಾಚಾರ್ಯ ಜಗದ್ಗುರುಗಳು ಇವರು, ಸುಮಾರು 18 ಮಠಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದವರು, ಸಿದ್ಧಾಂತ ಶಿಖಾಮಣಿ ಗ್ರಂಥವನ್ನು ರಚನೆ ಮಾಡಿದವರು ಎಂದು ಹೇಳಿದರು. ಗ್ರಾಮದ ಹಿರಿಯರಾದ ಈರ್ಪ ಬ ಉಳವಿ, ಶ್ರೀಧರ ಛಾಯಾಲ್, ಗಂಗಪ್ಪ ಸಿ ಉಳವಿ, ಲಕ್ಷ್ಮಣ ಕಡಬಿ, ನಿಂಗಪ್ಪರ ಬಡವಣ್ಣವರ, ಮಲ್ಲಪ್ಪ ಬನ್ನೂರ, ಅಡಿಯಪ್ಪ ಹಡಿಗಿನಾಳ, ಶಿವಲಿಂಗಪ್ಪ ಜಕಾತಿ, ಬಸಪ್ಪ ದೊಡ್ಡಲಿಂಗಣ್ಣವರ ಸೇರಿದಂತೆ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು. ಮಲ್ಲಿಕಾರ್ಜುನ್ ಬನ್ನೂರ್ ನಿರೂಪಿಸಿದರು. ವೀರಭದ್ರ್ಪ ಬಡಿಗೇರ ವಂದನಾರೆ್ಣ ನೆರವೇರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 