ನ್ಯಾಸ ರೆಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ
Republic Day Celebration at Nyasa Reddy Government Junior Primary School
ನ್ಯಾಸ ರೆಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ
ಹೊಸಪೇಟೆ 02:ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ನ್ಯಾಸ ರೆಡ್ಡಿ ಕ್ಯಾಂಪ್ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ವಿಜಯನಗರ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲೆ ಘಟಕ ಹಾಗೂ ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ ಹೊಸಪೇಟೆ ಸಹಯೋಗದೊಂದಿಗೆ ಆಯೋಜಿಸಿದ ಭಾರತ ಗಣರಾಜ್ಯೋತ್ಸವ ದಿನಾಚರಣೆ ವಿಜೃಂಭಣೆಯಿಂದ ಜರುಗಿತು.
ಹೊಸಪೇಟೆ ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ತು ಗೌರವ ಅಧ್ಯಕ್ಷರಾದ ಜ್ಯೋತಿಷ್ಯ ರತ್ನಾಕರ ಎಂ ವಿರೂಪಾಕ್ಷಯ್ಯ ಸ್ವಾಮಿ ಮಾತನಾಡಿ, ಮಕ್ಕಳೇ ಮುಂದಿನ ಪ್ರಜೆಗಳು ಪೌರರು ಮಕ್ಕಳು ಸಹಬಾಳ್ವೆ ಭಾವೈಕ್ಯತೆ ಮೈಗೂಡಿಸಿಕೊಂಡು ದೇಶ ಪ್ರೇಮಿಗಳಾಗಬೇಕೆಂದು ತಿಳಿ ಹೇಳಿದರು. ವಿಜಯನಗರ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವೆಂಕಟೇಶ್ ಬಡಿಗೇರ್ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ವಿವಿಧ ಸಹ ಪಠ್ಯ ಚಟುವಟಿಕೆ ಜೊತೆಗೆ ದೇಶಪ್ರೇಮ ಸಹಬಾಳ್ವೆ ಸೋದರತ್ವ ರಾಷ್ಟ್ರೀಯ ಭಾವೈಕ್ಯತೆ ಜಾತಿ ಧರ್ಮ ಮೀರಿದ ಪ್ರೀತಿ ವಿಶ್ವ ಪಥದತ್ತ ಹೆಜ್ಜೆ. ಮಕ್ಕಳು ದೇವರ ಸ್ವರೂಪ ಅವರ ಬದುಕು ಸುಂದರ ಹೂ ತೋಟದಂತೆ ಇಡೋಣ ಎಂದರು. ಮಕ್ಕಳು ವಿವಿಧ ವೇಷ ಭೂಷಣ ಸ್ವಾತಂತ್ರ ಹೋರಾಟಗಾರರ ವೇಷ ಮನಸೂರಗೊಂಡಿತು. ಹೊಸಪೇಟೆ ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶಿವರಾಜ್ , ಮುಖ್ಯ ಶಿಕ್ಷಕರಾದ ಪರಮೇಶ್ವರ ನಾಯಕ್, ವಿದ್ಯಾರ್ಥಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 