ಕಿನ್ನಾಳ ಬಸ್ಟಾಂಡ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

ಕಿನ್ನಾಳ ಬಸ್ಟಾಂಡ್ ನಲ್ಲಿ ಗಣರಾಜ್ಯೋತ್ಸವ ಆಚರಣೆ  Republic Day celebration at Kinna bus stand


ಕೊಪ್ಪಳ 27: ತಾಲೂಕಿನ ಕಿನ್ನಾಳ ಗ್ರಾಮದ ಕೆಕೆಆರ್ಟಿಸಿ ಬಸ್ ನಿಲ್ದಾಣದಲ್ಲಿ 77ನೇ ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ, ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿ ಆಚರಿಸಲಾಯಿತು, ಕಿನ್ನಾಳ ಬಸ್ ನಿಲ್ದಾಣದ ಸಂಚಾರ ನಿಯಂತ್ರಕರಾದ ಸತ್ಯ ನಾರಾಯಣ ಮುಂಡರಗಿ ರವರು ವಿಶೇಷ ಪೂಜೆ ಸಲ್ಲಿಸಿ ಗಣರಾಜ್ಯೋತ್ಸವ ದಿನಾಚರಣೆ ಗೆ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಚಾಲಕ ಮಂಜುನಾಥ್, ನಿರ್ವಾಹಕ ಬಸವರಾಜ್, ಅಭಿಷೇಕ್ ಮತ್ತು ಮನೋಜ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು