ಸಮರ್ಪಕ ವಿದ್ಯುತ್ ಸರಬರಾಜಿಗೆ ಆಗ್ರಹಿಸಿ ಮನವಿ
ರಾಯಬಾಗ 14: ತಾಲೂಕಿನ ಮೇಖಳಿ, ಮಾರಡಿ ಗ್ರಾಮಗಳಲ್ಲಿ ಸರಿಯಾಗಿ ವಿದ್ಯುತ್ ಪೂರೈಕೆಯಾಗದೇ ಸಾರ್ವಜನಿಕರಿಗೆ ಮತ್ತು ರೈತರಿಗೆ ತುಂಬಾ ತೊಂದರೆ ಆಗುತ್ತಿದ್ದು, ಹೆಸ್ಕಾಂ ಅಧಿಕಾರಿಗಳು ಈ ಗ್ರಾಮಗಳಿಗೆ ಸರಿಯಾಗಿ ವಿದ್ಯುತ್ ಸರಬರಾಜು ಮಾಡಬೇಕೆಂದು ಆಗ್ರಹಿಸಿ ಕನರ್ಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಹೆಸ್ಕಾಂ ಅಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಹೆಸ್ಕಾಂದವರು ನಿಗದಿತ ಸಮಯ ಪಾಲನೆಯೊಂದಿಗೆ ವಿದ್ಯುತ್ ಸರಬರಾಜು ಮಾಡುವುದನ್ನು ಬಿಟ್ಟು, ತಮಗೆ ಇಚ್ಛೆ ಬಂದತೆ ವಿದ್ಯುತ್ ನೀಡುತ್ತಿರುವುದರಿಂದ ರೈತರು ಹಗಲು ರಾತ್ರಿ ಎನ್ನದೆ ವಿದ್ಯುತ್ಗಾಗಿ ಕಾಯುವ ಪರಿಸ್ಥಿತಿ ಬಂದಿದೆ. ಹೆಸ್ಕಾಂದವರು ಶಿಸ್ತು ಬದ್ದತೆ ಕಾಯ್ದುಕೊಳ್ಳಬೇಕಾದ ಅವಶ್ಯಕತೆ ಇದೆ. ಅಧಿಕಾರಿಗಳು ರೈತರೊಂದಿಗೆ ಸ್ಪಂದನೆ ಮಾಡದೇ ಇರುವುದರಿಂದ ಬೆಳೆಗಳು ಒಣಗಿ ರೈತರು ಸಂಕಷ್ಟ ಪಡುವಂತಾಗಿದೆ. ರೈತರ ಮನವಿಗೆ ಸ್ಪಂದಿಸದ ಅಧಿಕಾರಿಗಳಿಗೆ ತಕ್ಕ ಬುದ್ದಿವಾದ ಹೇಳಿ ತಕ್ಷಣಕ್ಕೆ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾಎ.
ಎಲ್.ಆರ.ಹೊಸಟ್ಟಿ, ತ್ಯಾಗರಾಜ ಕದಂ, ಬಾಬು ಹಿರೇಮಠ, ರವಿಂದ್ರ ಪಟ್ಟಗಾರ, ಲಕ್ಷ್ಮಣ ಹೊಸಟ್ಟಿ, ಮಲ್ಲಪ್ಪ ಅಂಗಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 