ರಾಯಬಾಗ : ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆಗೆ ಒತ್ತಾಯಿಸಿ ಮನವಿ
ರಾಯಬಾಗ 18: ಪಟ್ಟಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ತೀವ್ರ ಉದ್ಭವಿಸಿದ್ದು, ಕೂಡಲೇ ಟ್ಯಾಂಕರ್ ಮೂಲಕ ನೀರನ್ನು ಪೂರೈಸುವ ವ್ಯವಸ್ಥೆ ಮಾಡಬೇಕೆಂದು ಶಾಸಕ ಡಿ.ಎಮ್.ಐಹೊಳೆ ಅವರ ನೇತೃತ್ವದಲ್ಲಿ ತಹಶೀಲ್ದಾರ ಡಿ.ಎಚ್.ಕೋಮರ್ ಅವರಿಗೆ ಶುಕ್ರವಾರ ಸಾಯಂಕಾಲ ಮನವಿ ಸಲ್ಲಿಸಿದರು.
ಪಟ್ಟಣಕ್ಕೆ ನೀರು ಪೂರೈಸುವ ಹುಲ್ಯಾಳ ಕೆರೆ ಬತ್ತಿ ಹೋಗಿದ್ದು, ಪಟ್ಟಣದ ಶೇ.80ರಷ್ಟು ಕೊಳವೆ ಬಾವಿಗಳು ಸಹ ನೀರಿಲ್ಲದೇ ಬತ್ತಿ ಹೋಗಿವೆ. ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಪಟ್ಟಣದ ಜನರು ನೀರಿಗಾಗಿ ಪರಿತಪಿಸುವಂತಾಗಿದೆ. ಕಾರಣ ಸಾರ್ವಜನಿಕ ಹಿತದೃಷ್ಟಿಯಿಂದ ಪಟ್ಟಣದ ಜನರಿಗೆ ನೀರು ಒದಗಿಸುವ ಹುಲ್ಯಾಳ ಕೆರೆಗೆ ಘಟಪ್ರಭಾ ಎಡದಂಡೆ ಕಾಲುವೆಯಿಂದ ನೀರು ಹರಿಸಲು ಸರಕಾರದ ಗಮನಕ್ಕೆ ತಂದು ಕೆರೆ ಭತರ್ಿ ಮಾಡಿಸಬೇಕು. ಅಲ್ಲಿವರೆಗೆ ತಾತ್ಕಾಲಿಕವಾಗಿ ನೀರಿನ ತೀವ್ರ ಸಮಸ್ಯೆ ಇರುವ ವಾರ್ಡಗಳಿಗೆ ಟ್ಯಾಂಕರ್ ನೀರು ಸರಬರಾಜು ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕೂಡಲೇ ಪಟ್ಟಣದ ಜನರಿಗೆ ನೀರಿನ ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳದಿದ್ದರೆ ಸರಕಾರದ ವಿರುದ್ಧ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.
ಶಾಸಕ ಡಿ.ಎಮ್.ಐಹೊಳೆ, ಸದಾಶಿವ ಹಳಿಂಗಳಿ, ಸದಾಶಿವ ಘೋರ್ಪಡೆ, ಅಣ್ಣಾಸಾಬ ಖೆಮಲಾಪೂರೆ, ಅಣ್ಣಾಸಾಬ ಕುಲಗುಡೆ, ಡಾ.ಗಾಯತ್ರಿ ಬಾನೆ, ಅಪ್ಪಾಸಾಬ ಕುಲಗುಡೆ, ಜಿಯಾವುಲ್ಲಾ ಮುಲ್ಲಾ, ಸುರೇಶ ಮಾಳಿ ಸೇರಿದಂತೆಅನೇಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 