ಅವೈಜ್ಞಾನಿಕ ಪ್ರಶ್ನೆಪತ್ರಿಕೆಯ ಮಾದರಿಯನ್ನು ಬದಲಾಯಿಸಲು ಮನವಿ
ಲೋಕದರ್ಶನ ವರದಿ
ಕೊಪ್ಪಳ 16: ಇಂದು ಮಧ್ಯಾಹ್ನ ವಿಜಯನಗರ ಕಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕ್ಕೋತ್ತರ ಕೇಂದ್ರ ಕೊಪ್ಪಳದಿಂದ ಬಳ್ಳಾರಿ ವಿಶ್ವವಿದ್ಯಾಲಯಕ್ಕೆ ಎಐಡಿಎಸ್ಓ ಮತ್ತು ಎಐಡಿವೈಓ ಸಂಘಟನೆಯಿಂದ ಅವೈಜ್ಞಾನಿಕ ಪ್ರಶ್ನೆಪತ್ರಿಕೆಯ ಮಾದರಿಯನ್ನು ಬದಲಾಯಿಸಲು ಕೊರಿ ಮನವಿಯನ್ನು ಸಲ್ಲಿಸಲಾಯಿತು.
ಖ್ಯಾತವಾಗಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಅವೈಜ್ಞಾನಿಕ ರೀತಿಯಲ್ಲಿ ಪರೀಕ್ಷೆಯನ್ನು ನಡೆಸುತ್ತಿದೆ. ಸ್ನಾತಕೋತ್ತರ ಪದವಿಯಲ್ಲಿ ಕಲಾವಿಭಾಗದಲ್ಲಿ ಓದುತ್ತಿರುವ ವಿದ್ಯಾಥರ್ಿಗಳಿಗೆ ಮಾಧ್ಯಮ ಕನ್ನಡವಾಗಿದ್ದರೂ ಪ್ರಶ್ನೆಪತ್ರಿಕೆ ಮಾತ್ರ ಇಂಗ್ಲೀಷ ಬಾಷೆಯಲ್ಲಿ ಬರುತ್ತಿದೆ. ಇದರಿಂದ ಪರೀಕ್ಷಾ ಸಮಯದಲ್ಲಿ ವಿದ್ಯಾಥರ್ಿಗಳಿಗೆ ಉತ್ತರ ಗೊತ್ತಿದ್ದರೂ ಪ್ರಶ್ನೆಗಳು ಕೇವಲ ಇಂಗ್ಲೀಷನಲ್ಲಿ ಇರುವುದರಿಂದ ತೊಂದರೆಗಿಡಾಗುತ್ತಿದ್ದಾರೆ. ಬಹುತೇಕ ವಿದ್ಯಾಥರ್ಿಗಳು ಕನ್ನಡ ಮಾಧ್ಯಮ ಓದಿದರಿಂದ ಪ್ರಶ್ನೆ ಪತ್ರಿಕೆಗಳನ್ನು ಕನ್ನಡ ಮತ್ತು ಇಂಗ್ಲೀಷನಲ್ಲಿ ಪ್ರಕಟಿಸಬೇಕಾಗಿ ಎಐಡಿಎಸ್ಓ ಮತ್ತು ಎಐಡಿವೈಓ ಸಂಘಟನೆಯಿಂದ ಮನವಿಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸ್ನಾತಕ್ಕೋತ್ತರಕೇಂದ್ರದ ವಿಶೇಷ ಅಧಿಕಾರಿಗಳಾದ ಮಾನ್ಯ ಡಾ. ಮನೋಜ ಡೋಳ್ಳಿ ಮನವಿ ಪತ್ರವನ್ನು ಸ್ವೀಕರಿಸಿದರು. ವಿದ್ಯಾಥರ್ಿಗಳಾದ ಹನುಮನ ಗೌಡ, ಹನುಮಪ್ಪ, ಆನಂದ ಮಾರಕಟ್ಟಿ, ಮಾಲತೇಶ, ವಿರೇಶ, ಮತ್ತಿತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 