ರಸ್ತೆಗಳ ಕಾಂಕ್ರೀಟ್ ಮಾಡಲು ಮನವಿ
ಲೋಕದರ್ಶನ ವರದಿ
ಕಾರವಾರ 05: ನಗರದ ಕೆಎಚ್ಬಿ ಹೊಸ ಬಡಾವಣೆಯ ಒಳಭಾಗದ ರಸ್ತೆಗಳನ್ನು ಕೂಡ ಕಾಂಕ್ರೀಟ್ ಮಾಡಬೇಕು ಎಂದು ಸ್ಥಳೀಯ ನಿವಾಸಿಗಳು ಶಾಸಕಿ ರೂಪಾಲಿ ನಾಯ್ಕ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿ ಸಮೀಪದವರೆಗಿನ ರಸ್ತೆ (ಎ 16) ಹಾಗೂ ನೀರಿನ ಟ್ಯಾಂಕ್ವರೆಗಿನ ರಸ್ತೆ (ಎ 23) ಕಾಮಗಾರಿ ಮಾಡಲಾಗಿದೆ. ಅಲ್ಲಿಂದ ಮುಂದುವರಿಸುವ ಬಗ್ಗೆ ನಗರಸಭೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಇಲ್ಲಿ ಮಳೆಗಾಲದಲ್ಲಿ ನೀರು ನಿಂತು ಸಂಚರಿಸಲು ಕಷ್ಟವಾಗಲಿದೆ. ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮನವಿಗೆ ಸ್ಪಂದಿಸಿದ ರೂಪಾಲಿ ನಾಯ್ಕ ಬಡಾವಣೆಯ ಸಮಸ್ಯೆ ಗಮನಕ್ಕೆ ಬಂದಿದೆ. ಮಳೆಗಾಲಕ್ಕೂ ಮೊದಲೇ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗಜಾನನ, ಸ್ಥಳೀಯರಾದ ರಾಜೇಶ್ ನಾಯ್ಕ, ಮಂಗೇಶ ಆರ್.ಭಟ್, ಪ್ರಶಾಂತ ನಾಯ್ಕ, ಜಂಬೋ ಮೇಸ್ತ, ನಾರಾಯಣ ಆಚಾರಿ, ಸುರೇಶ ಗಾಂವಕರ, ಪರಶುರಾಮ ನಾಯ್ಕ, ಬಾಲರಾಜ ನಾಡರ, ಹೈದರ್ ಶರೀಫ್, ಮಂಜ ಶೇಟ್ ಮೊದಲಾದವರು ಇದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 