ಜೋಳ ಖರೀದಿಯ ಗರಿಷ್ಟ ಮೀತಿ ಹೆಚ್ಚಿಸುವಂತೆ ಮನವಿ
Request to increase the maximum limit for purchasing corn
ಲೋಕದರ್ಶನ ವರದಿ
ಜೋಳ ಖರೀದಿಯ ಗರಿಷ್ಟ ಮೀತಿ ಹೆಚ್ಚಿಸುವಂತೆ ಮನವಿ
ಕಂಪ್ಲಿ 18: ಹಿಂಗಾರು ಜೋಳ ಖರೀದಿಯ ಗರೀಷ್ಟ ಮೀತಿಯನ್ನು ಹೆಚ್ಚಿಸುವಂತೆ ಮಾನ್ಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ ಇವರು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಇವರಿಗೆ ಮನವಿ ಮಾಡಿದರು. ನಂತರ ಶಾಸಕ ಗಣೇಶ್ ಇವರು ಪತ್ರಕರ್ತರೊಂದಿಗೆ ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಜೋಳ ಖರೀದಿ ನೋಂದಣಿ ಮಾಡಲು ಏ.13 ರಂದು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಸರ್ಕಾರದ ಪತ್ರದಂತೆ ಬಳ್ಳಾರಿ ಜಿಲ್ಲೆಗೆ 4000 ಎಂ.ಟಿ. ಮೀತಿಯನ್ನು ನಿಗಧಿಪಡೆಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಹಿಂಗಾರು ಬೆಳೆಯ ನೊಂದಣಿಯಲ್ಲಿ ಈವರೆಗೆ 457 ರೈತರಿಂದ 4266 ಎಂ.ಟಿ. ಪ್ರಮಾಣದ ಜೋಳ ನೋಂದಣಿಯಾಗಿರುತ್ತದೆ. ಪ್ರಯುಕ್ತ ಜಿಲ್ಲೆಯಲ್ಲಿ ಹಿಂಗಾರು ಜೋಳ ಬೆಳೆದಿರುವ ವಿಸ್ತೀರ್ಣ 24660.39 ಎಕ್ಟರ್ನಲ್ಲಿ 36990.585 ಎಂ.ಟಿ ಉತ್ಪಾದನೆಯಾಗಿದ್ದು, ರೈತರಲ್ಲಿ ಸಂಖ್ಯೆ ಹೆಚ್ಚಿದ್ದು, ರೈತ ಜೋಳ ಖರೀದಿ ಮಾಡಲು ಬೇಡಿಕೆಯನ್ನು ನೀಡಿರುತ್ತಾರೆ. ಹಾಗೂ ಖರೀದಿ ಕೇಂದ್ರದ ಮುಂದೆ ಪ್ರತಿಭಟನೆಯನ್ನು ನಡೆಸುತ್ತಿದ್ದು, ಹಾಗಾಗಿ, ಜಿಲ್ಲೆಗೆ ನಿಗಧಿಪಡೆಸಲಾದ ಖರೀದಿ ಪ್ರಮಾಣದ ಆದೇಶವನ್ನು ಹಿಂಪಡೆದು ಕಳೆದ ವರ್ಷದ ಆದೇಶದಂತೆ ಯಾವುದೇ ಗರಿಷ್ಠ ಮಿತಿ ಇಲ್ಲದೆ ರೈತರಿಂದ ಜೋಳವನ್ನು ಖರೀದಿಸಬೇಕೆಂದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 